<p><strong>ಕುಷ್ಟಗಿ</strong>: ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಬುಧವಾರ ತಡರಾತ್ರಿವರೆಗೂ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳಲ್ಲಿನ ಬೆಳೆಗಳಿಗೆ ಹಾನಿಯಾಗಿದೆ.</p>.<p>ಬಸಾಪುರ, ಟೆಂಗುಂಟಿ, ತೆಗ್ಗಿಹಾಳ, ಗೋನಾಳ ವ್ಯಾಪ್ತಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದೆ. ಹೊಲದ ಒಡ್ಡುಗಳು ಒಡೆದು ಹಾಳಾಗಿವೆ. ಕೃಷಿ, ತೋಟಗಾರಿಕೆಯಲ್ಲಿನ ಬೆಳೆ ಇರುವ ಜಮೀನುಗಳು ನೀರಿನಿಂದ ಭರ್ತಿಯಾಗಿವೆ. ಮೇಲ್ಮಣ್ಣು ಕೊಚ್ಚಿಹೋಗಿದೆ ಎಂದು ರೈತರಾದರ ವೀರಭದ್ರಪ್ಪ, ಕರಬಸಪ್ಪ ಗುಡದೂರು ಇತರರು ಹೇಳಿದರು.</p>.<p>ಈ ಪ್ರದೇಶದಲ್ಲಿನ ದೊಡ್ಡ ಹಳ್ಳಕ್ಕೆ ಪ್ರವಾಹದ ರೂಪದಲ್ಲಿನ ನೀರು ಅಕ್ಕಪಕ್ಕದಲ್ಲಿನ ಜಮೀನುಗಳಿಗೆ ನುಗ್ಗಿ ಹತ್ತಿ ಬೀಜೋತ್ಪಾದನೆ ತಾಕುಗಳಿಗೆ ಬಹಳಷ್ಟು ಹಾನಿಯಾಗಿದೆ. ಅಲ್ಲದೆ ಇತರೆ ಕೃಷಿ ಬೆಳೆಗಳು ಕೊಚ್ಚಿಹೋಗಿವೆ ಎಂದು ರೈತರು ತಿಳಿಸಿದ್ದಾರೆ. ಮುದೇನೂರು ಬಳಿಯ ಜಿನುಗು ಕೆರೆ ಭರ್ತಿಯಾಗಿದ್ದು, ಕೋಡಿ ಹರಿಯುತ್ತಿದೆ.</p>.<p>ಒಂದೂವರೆ ತಿಂಗಳಿನಿಂದಲೂ ಮಳೆ ಇಲ್ಲದೆ ಬೆಳೆಗಳು ಬಾಡುತ್ತಿದ್ದುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದರು. ಮುಂದಿನ ದಿನಗಳಲ್ಲಿ ಮೇವಿನ ಕೊರತೆಯೂ ಉಂಟಾಗುತ್ತದೆ ಎಂಬ ಚಿಂತೆ ಆವರಿಸಿತ್ತು. ಈಗಲಾದರೂ ಉತ್ತಮ ರೀತಿಯಲ್ಲಿ ಮಳೆ ಆಗಿರುವುದರಿಂದ ಬೆಳೆಗಳು ಚೇತರಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೆಸರು ಗದ್ದೆಯಾದ ಶಾಲಾ ಆವರಣ: ತಾಲ್ಲೂಕಿನ ಮುದೇನೂರು ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೈದಾನವು, ಮಳೆ ಬಂದರೆ ಕೆಸರು ಗದ್ದೆಯಂತಾಗುತ್ತದೆ. ಶಾಲೆ ಸುತ್ತಲಿನ ಸುಮಾರು ಹತ್ತಾರು ಎಕರೆ ಜಮೀನನಲ್ಲಿಯ ಮಳೆ ನೀರು ಹರಿದು ನೇರವಾಗಿ ಶಾಲಾ ಮೈದಾನದಲ್ಲಿ ಸಂಗ್ರಹಗೊಳ್ಳುತ್ತದೆ. ಈ ಸಮಸ್ಯೆ ಈಗಿನದಲ್ಲ. ಅನೇಕ ವರ್ಷಗಳಿಂದ ಇದ್ದು ಪರಿಹಾರ ಮಾತ್ರ ದೊರಕಿಲ್ಲ’ ಎಂದು ಗ್ರಾಮಸ್ಥ ಮಲ್ಲಿಕಾರ್ಜುನ ಹಳೆಗೌಡ್ರ ಬೇಸರ ವ್ಯಕ್ತಪಡಿಸಿದರು.</p>.<p>‘ನೀರು ಹರಿದು ಹೊರಗೆ ಹೋಗುವಂತೆ ಚರಂಡಿ ನಿರ್ಮಿಸಿ ಉಪಕಾರ ಮಾಡಿ ಎಂದು ಶಾಸಕರು, ಜನಪ್ರತಿನಿಧಿಗಳು, ಗ್ರಾ.ಪಂ.ಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಸಮಸ್ಯೆಯನ್ನು ಅಧಿಕಾರಸ್ಥರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಗ್ರಾಮಸ್ಥ ಬಸವರಾಜ ಇತರರು ಅಸಮಾಧಾನ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಬುಧವಾರ ತಡರಾತ್ರಿವರೆಗೂ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳಲ್ಲಿನ ಬೆಳೆಗಳಿಗೆ ಹಾನಿಯಾಗಿದೆ.</p>.<p>ಬಸಾಪುರ, ಟೆಂಗುಂಟಿ, ತೆಗ್ಗಿಹಾಳ, ಗೋನಾಳ ವ್ಯಾಪ್ತಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದೆ. ಹೊಲದ ಒಡ್ಡುಗಳು ಒಡೆದು ಹಾಳಾಗಿವೆ. ಕೃಷಿ, ತೋಟಗಾರಿಕೆಯಲ್ಲಿನ ಬೆಳೆ ಇರುವ ಜಮೀನುಗಳು ನೀರಿನಿಂದ ಭರ್ತಿಯಾಗಿವೆ. ಮೇಲ್ಮಣ್ಣು ಕೊಚ್ಚಿಹೋಗಿದೆ ಎಂದು ರೈತರಾದರ ವೀರಭದ್ರಪ್ಪ, ಕರಬಸಪ್ಪ ಗುಡದೂರು ಇತರರು ಹೇಳಿದರು.</p>.<p>ಈ ಪ್ರದೇಶದಲ್ಲಿನ ದೊಡ್ಡ ಹಳ್ಳಕ್ಕೆ ಪ್ರವಾಹದ ರೂಪದಲ್ಲಿನ ನೀರು ಅಕ್ಕಪಕ್ಕದಲ್ಲಿನ ಜಮೀನುಗಳಿಗೆ ನುಗ್ಗಿ ಹತ್ತಿ ಬೀಜೋತ್ಪಾದನೆ ತಾಕುಗಳಿಗೆ ಬಹಳಷ್ಟು ಹಾನಿಯಾಗಿದೆ. ಅಲ್ಲದೆ ಇತರೆ ಕೃಷಿ ಬೆಳೆಗಳು ಕೊಚ್ಚಿಹೋಗಿವೆ ಎಂದು ರೈತರು ತಿಳಿಸಿದ್ದಾರೆ. ಮುದೇನೂರು ಬಳಿಯ ಜಿನುಗು ಕೆರೆ ಭರ್ತಿಯಾಗಿದ್ದು, ಕೋಡಿ ಹರಿಯುತ್ತಿದೆ.</p>.<p>ಒಂದೂವರೆ ತಿಂಗಳಿನಿಂದಲೂ ಮಳೆ ಇಲ್ಲದೆ ಬೆಳೆಗಳು ಬಾಡುತ್ತಿದ್ದುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದರು. ಮುಂದಿನ ದಿನಗಳಲ್ಲಿ ಮೇವಿನ ಕೊರತೆಯೂ ಉಂಟಾಗುತ್ತದೆ ಎಂಬ ಚಿಂತೆ ಆವರಿಸಿತ್ತು. ಈಗಲಾದರೂ ಉತ್ತಮ ರೀತಿಯಲ್ಲಿ ಮಳೆ ಆಗಿರುವುದರಿಂದ ಬೆಳೆಗಳು ಚೇತರಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೆಸರು ಗದ್ದೆಯಾದ ಶಾಲಾ ಆವರಣ: ತಾಲ್ಲೂಕಿನ ಮುದೇನೂರು ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೈದಾನವು, ಮಳೆ ಬಂದರೆ ಕೆಸರು ಗದ್ದೆಯಂತಾಗುತ್ತದೆ. ಶಾಲೆ ಸುತ್ತಲಿನ ಸುಮಾರು ಹತ್ತಾರು ಎಕರೆ ಜಮೀನನಲ್ಲಿಯ ಮಳೆ ನೀರು ಹರಿದು ನೇರವಾಗಿ ಶಾಲಾ ಮೈದಾನದಲ್ಲಿ ಸಂಗ್ರಹಗೊಳ್ಳುತ್ತದೆ. ಈ ಸಮಸ್ಯೆ ಈಗಿನದಲ್ಲ. ಅನೇಕ ವರ್ಷಗಳಿಂದ ಇದ್ದು ಪರಿಹಾರ ಮಾತ್ರ ದೊರಕಿಲ್ಲ’ ಎಂದು ಗ್ರಾಮಸ್ಥ ಮಲ್ಲಿಕಾರ್ಜುನ ಹಳೆಗೌಡ್ರ ಬೇಸರ ವ್ಯಕ್ತಪಡಿಸಿದರು.</p>.<p>‘ನೀರು ಹರಿದು ಹೊರಗೆ ಹೋಗುವಂತೆ ಚರಂಡಿ ನಿರ್ಮಿಸಿ ಉಪಕಾರ ಮಾಡಿ ಎಂದು ಶಾಸಕರು, ಜನಪ್ರತಿನಿಧಿಗಳು, ಗ್ರಾ.ಪಂ.ಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಸಮಸ್ಯೆಯನ್ನು ಅಧಿಕಾರಸ್ಥರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಗ್ರಾಮಸ್ಥ ಬಸವರಾಜ ಇತರರು ಅಸಮಾಧಾನ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>