<p><strong>ಕುಕನೂರು: </strong>ತಾಲ್ಲೂಕಿನ ಇಟಗಿ ಗ್ರಾಮ ಪಂಚಾಯಿತಿ ಆವರಣಕ್ಕೆ ಕಾಲಿಟ್ಟರೆ ಸಾಕು ಒಂದಷ್ಟು ನೆಮ್ಮದಿ ದೊರಕುತ್ತದೆ. ಅದಕ್ಕೆ ಕಾರಣ ಉದ್ಯಾನ.</p>.<p>2021-22ನೇ ಸಾಲಿನ ನರೇಗಾ ಯೋಜನೆಯಡಿ ಸುಮಾರು ₹3 ಲಕ್ಷ ವೆಚ್ಚದಲ್ಲಿ ಪಂಚಾಯಿತಿ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗಿದೆ.</p>.<p>ಈ ಮುಂಚೆ ಖಾಲಿ ಖಾಲಿಯಾಗಿದ್ದ ಆವರಣ ಈಗ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಸ್ಥೆ ವಹಿಸಿ ಉದ್ಯೋಗ ಖಾತರಿ ಯೋಜನೆಯಡಿ ಉದ್ಯಾನ ನಿರ್ಮಾಣ ಮಾಡಿದ್ದಾರೆ.</p>.<p>ಆವರಣದಲ್ಲಿ 15 ಅಡಿ ಉದ್ದ ಹಾಗೂ 20 ಅಡಿ ಅಗಲದ ಜಾಗದಲ್ಲಿ ಈ ಉದ್ಯಾನ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ 204 ಮಾನವ ದಿನಗಳು ಸೃಜನೆಯಾಗಿದ್ದು, ಕಾರ್ಮಿಕರಿಗೆ ₹58960 ಕೂಲಿ ಸಿಕ್ಕಿದೆ.</p>.<p>ನೆರಳಿನಲ್ಲಿ ಬೆಳೆಯುವ ಸಸಿಗಳನ್ನು ನೆಡಲಾಗಿದೆ. ಉದ್ಯಾನದ ಮೂಲೆಗೆ ವಿದ್ಯುತ್ ದೀಪಗಳನ್ನು ಅಳವಡಿಸಿದ್ದು, ರಾತ್ರಿ ಸಮಯದಲ್ಲಿ ಜಗಮಗಿಸುತ್ತವೆ. ಖಾಲಿ ಇದ್ದ ಜಾಗವೀಗ ಹಸಿರು ಹುಲ್ಲಿನಿಂದ ಕಂಗೊಳಿಸುತ್ತ ಪಂಚಾಯಿತಿಗೆ ಬರುವವರನ್ನು ಆಕರ್ಷಿಸುತ್ತಿದೆ.</p>.<p>ಬಾದಾಮಿ, ಹುಣಸೆ, ಬೇವು ಹಾಗೂ ತೋಟಗಾರಿಕೆ ಸಸಿಗಳಾದ ರಾಯಲ್ ಫಾಮ್, ಕ್ರಿಸ್ಮಸ್ ಟ್ರೀ, ರಿಬ್ಬನ್ ಗ್ರಾಸ್, ದಾಸವಾಳ, ಹಾಗೂ ನಂದಿವರ್ದನ ಹಾಗೂ ಆಲಂಕಾರಿಕ ಗಿಡಗಳನ್ನು ಹಚ್ಚಲಾಗಿದೆ. ಮುಂಬರುವ ದಿನಗಳಲ್ಲಿ ಸಸಿಗಳು ಬೆಳೆದಾಗ ಆವರಣಕ್ಕೆ ಮತ್ತಷ್ಟು ಮೆರುಗು ಬರಲಿದೆ.</p>.<p>‘ಗ್ರಾ.ಪಂ. ಕಟ್ಟಡಕ್ಕೆ ನರೇಗಾದಡಿ ಮಳೆ ನೀರು ಸಂರಕ್ಷಣೆ ಘಟಕ ನಿರ್ಮಾಣ ಮಾಡಲಾಗಿದೆ. ನೀರಿನ ಅಭಾವ ಸೃಷ್ಟಿಯಾದಾಗ ಈ ಘಟಕದಲ್ಲಿ ಸಂಗ್ರಹವಾಗುವ ಮಳೆ ನೀರನ್ನು ಉದ್ಯಾನದ ಸಸಿಗಳಿಗೆ ನೀರುಣಿಸಲು ಬಳಸಿಕೊಳ್ಳಲು ಯೋಜಿಸಲಾಗಿದೆ’ ಎಂದು ಐಇಸಿ ಸಂಯೋಜಕ ಶರಣಪ್ಪ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು: </strong>ತಾಲ್ಲೂಕಿನ ಇಟಗಿ ಗ್ರಾಮ ಪಂಚಾಯಿತಿ ಆವರಣಕ್ಕೆ ಕಾಲಿಟ್ಟರೆ ಸಾಕು ಒಂದಷ್ಟು ನೆಮ್ಮದಿ ದೊರಕುತ್ತದೆ. ಅದಕ್ಕೆ ಕಾರಣ ಉದ್ಯಾನ.</p>.<p>2021-22ನೇ ಸಾಲಿನ ನರೇಗಾ ಯೋಜನೆಯಡಿ ಸುಮಾರು ₹3 ಲಕ್ಷ ವೆಚ್ಚದಲ್ಲಿ ಪಂಚಾಯಿತಿ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗಿದೆ.</p>.<p>ಈ ಮುಂಚೆ ಖಾಲಿ ಖಾಲಿಯಾಗಿದ್ದ ಆವರಣ ಈಗ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಸ್ಥೆ ವಹಿಸಿ ಉದ್ಯೋಗ ಖಾತರಿ ಯೋಜನೆಯಡಿ ಉದ್ಯಾನ ನಿರ್ಮಾಣ ಮಾಡಿದ್ದಾರೆ.</p>.<p>ಆವರಣದಲ್ಲಿ 15 ಅಡಿ ಉದ್ದ ಹಾಗೂ 20 ಅಡಿ ಅಗಲದ ಜಾಗದಲ್ಲಿ ಈ ಉದ್ಯಾನ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ 204 ಮಾನವ ದಿನಗಳು ಸೃಜನೆಯಾಗಿದ್ದು, ಕಾರ್ಮಿಕರಿಗೆ ₹58960 ಕೂಲಿ ಸಿಕ್ಕಿದೆ.</p>.<p>ನೆರಳಿನಲ್ಲಿ ಬೆಳೆಯುವ ಸಸಿಗಳನ್ನು ನೆಡಲಾಗಿದೆ. ಉದ್ಯಾನದ ಮೂಲೆಗೆ ವಿದ್ಯುತ್ ದೀಪಗಳನ್ನು ಅಳವಡಿಸಿದ್ದು, ರಾತ್ರಿ ಸಮಯದಲ್ಲಿ ಜಗಮಗಿಸುತ್ತವೆ. ಖಾಲಿ ಇದ್ದ ಜಾಗವೀಗ ಹಸಿರು ಹುಲ್ಲಿನಿಂದ ಕಂಗೊಳಿಸುತ್ತ ಪಂಚಾಯಿತಿಗೆ ಬರುವವರನ್ನು ಆಕರ್ಷಿಸುತ್ತಿದೆ.</p>.<p>ಬಾದಾಮಿ, ಹುಣಸೆ, ಬೇವು ಹಾಗೂ ತೋಟಗಾರಿಕೆ ಸಸಿಗಳಾದ ರಾಯಲ್ ಫಾಮ್, ಕ್ರಿಸ್ಮಸ್ ಟ್ರೀ, ರಿಬ್ಬನ್ ಗ್ರಾಸ್, ದಾಸವಾಳ, ಹಾಗೂ ನಂದಿವರ್ದನ ಹಾಗೂ ಆಲಂಕಾರಿಕ ಗಿಡಗಳನ್ನು ಹಚ್ಚಲಾಗಿದೆ. ಮುಂಬರುವ ದಿನಗಳಲ್ಲಿ ಸಸಿಗಳು ಬೆಳೆದಾಗ ಆವರಣಕ್ಕೆ ಮತ್ತಷ್ಟು ಮೆರುಗು ಬರಲಿದೆ.</p>.<p>‘ಗ್ರಾ.ಪಂ. ಕಟ್ಟಡಕ್ಕೆ ನರೇಗಾದಡಿ ಮಳೆ ನೀರು ಸಂರಕ್ಷಣೆ ಘಟಕ ನಿರ್ಮಾಣ ಮಾಡಲಾಗಿದೆ. ನೀರಿನ ಅಭಾವ ಸೃಷ್ಟಿಯಾದಾಗ ಈ ಘಟಕದಲ್ಲಿ ಸಂಗ್ರಹವಾಗುವ ಮಳೆ ನೀರನ್ನು ಉದ್ಯಾನದ ಸಸಿಗಳಿಗೆ ನೀರುಣಿಸಲು ಬಳಸಿಕೊಳ್ಳಲು ಯೋಜಿಸಲಾಗಿದೆ’ ಎಂದು ಐಇಸಿ ಸಂಯೋಜಕ ಶರಣಪ್ಪ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>