ಆರೋಪಿ ಕಲ್ಯಾಣಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬಾಧಿತಳ ಸಹೋದರನಿಗೆ ಪರಿಚಯವಾಗಿ, ಮನೆಗೆ ಬಂದು ಹೋಗಿ ಮಾಡುತ್ತಿದ್ದರಿಂದ ಅಪ್ರಾಪ್ತೆಗೆ ಪರಿಚಯವಾಗಿ, ಇಬ್ಬರ ಮಧ್ಯೆ ಪ್ರೀತಿ ಬೆಳೆದು, 2017ರ ಏ.22 ರಂದು ಕಾರಟಗಿ ಠಾಣೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಮದುವೆಯಾಗುವುದಾಗಿ ನಂಬಿಸಿ, ನೀನು ಬರದಿದ್ದರೆ ಸಾಯು ತ್ತೇನೆ ಎಂದು ಹೆದರಿಸಿ ಒತ್ತಾಯದಿಂದ ಅಪಹರಿಸಿಕೊಂಡು ಬೆಂಗಳೂರಿನ ಹೆಬ್ಬುಗೋಡೆಯ ವ್ಯಾಪ್ತಿಯಲ್ಲಿ ಶಿವರಾಜ ಎನ್ನುವವರ ಒಂದು ಕೊಠಡಿಯನ್ನು ಬಾಡಿಗೆ ಪಡೆದು ವಾಸವಾಗಿದ್ದನು. ಅಲ್ಲಿ ಅಪ್ರಾಪ್ತೆ ಇಚ್ಛೆಗೆ ವಿರುದ್ಧವಾಗಿ ಅತ್ಯಾ ಚಾರ ಎಸಗಿದ್ದು ಅಲ್ಲದೇ, ಜೀವ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.