<p><strong>ಯಲಬುರ್ಗಾ: </strong>ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಎರಡು ತಿಂಗಳ ಪಡಿತರ ಆಹಾರಧಾನ್ಯವನ್ನು ಒಟ್ಟಿಗೆ ವಿತರಿಸಲು ಕ್ರಮ ಕೈಗೊಂಡಿದೆ.</p>.<p>ತಾಲ್ಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ ಶುರುವಾಗಿದೆ. ಕೊನೆಯ ದಿನಾಂಕ ನಿಗದಿಯಾಗಿಲ್ಲ. ಯಾವುದೇ ಕಾರಣಕ್ಕೂ ಒಟ್ಟಿಗೆ ಸೇರಿ ಜನದಟ್ಟಣೆ ಮಾಡಬಾರದು ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ಹೇಳಿದರು.</p>.<p>ಆಹಾರ ಧಾನ್ಯ ಪಡೆದುಕೊಳ್ಳುವುದಕ್ಕೆ ಏ.15 ಕಡೆಯದಿನ ಎಂದು ತಪ್ಪು ಸಂದೇಶ ಹರಡಿರುವುದರಿಂದ ಗ್ರಾಹಕರು ನ್ಯಾಯಬೆಲೆ ಅಂಗಡಿಗೆ ಒಟ್ಟಿಗೆ ಹೋಗಿ ಸ್ವೀಕರಿಸಲು ಮುಂದಾಗುತ್ತಿದ್ದಾರೆ. ಇದರಿಂದ ಜನದಟ್ಟಣೆ ಹೆಚ್ಚಾಗಿ ನೂಕು ನುಗ್ಗಾಟ ಉಂಟಾಗುತ್ತಿದೆ ಎಂದರು.</p>.<p>ಗುಂಪು ಗುಂಪಾಗಿ ಸೇರುವುದರಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿವೆ. ಪ್ರತಿ ಗ್ರಾಹಕರಿಗೂ ಧಾನ್ಯಗಳು ಲಭ್ಯವಾಗಲಿದ್ದು, ಶಾಂತ ರೀತಿಯಲ್ಲಿ ಮತ್ತು ಅಂತರ ಕಾಯ್ದುಕೊಂಡು ಪಡೆದುಕೊಳ್ಳಬೇಕು. ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ: </strong>ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಎರಡು ತಿಂಗಳ ಪಡಿತರ ಆಹಾರಧಾನ್ಯವನ್ನು ಒಟ್ಟಿಗೆ ವಿತರಿಸಲು ಕ್ರಮ ಕೈಗೊಂಡಿದೆ.</p>.<p>ತಾಲ್ಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ ಶುರುವಾಗಿದೆ. ಕೊನೆಯ ದಿನಾಂಕ ನಿಗದಿಯಾಗಿಲ್ಲ. ಯಾವುದೇ ಕಾರಣಕ್ಕೂ ಒಟ್ಟಿಗೆ ಸೇರಿ ಜನದಟ್ಟಣೆ ಮಾಡಬಾರದು ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ಹೇಳಿದರು.</p>.<p>ಆಹಾರ ಧಾನ್ಯ ಪಡೆದುಕೊಳ್ಳುವುದಕ್ಕೆ ಏ.15 ಕಡೆಯದಿನ ಎಂದು ತಪ್ಪು ಸಂದೇಶ ಹರಡಿರುವುದರಿಂದ ಗ್ರಾಹಕರು ನ್ಯಾಯಬೆಲೆ ಅಂಗಡಿಗೆ ಒಟ್ಟಿಗೆ ಹೋಗಿ ಸ್ವೀಕರಿಸಲು ಮುಂದಾಗುತ್ತಿದ್ದಾರೆ. ಇದರಿಂದ ಜನದಟ್ಟಣೆ ಹೆಚ್ಚಾಗಿ ನೂಕು ನುಗ್ಗಾಟ ಉಂಟಾಗುತ್ತಿದೆ ಎಂದರು.</p>.<p>ಗುಂಪು ಗುಂಪಾಗಿ ಸೇರುವುದರಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿವೆ. ಪ್ರತಿ ಗ್ರಾಹಕರಿಗೂ ಧಾನ್ಯಗಳು ಲಭ್ಯವಾಗಲಿದ್ದು, ಶಾಂತ ರೀತಿಯಲ್ಲಿ ಮತ್ತು ಅಂತರ ಕಾಯ್ದುಕೊಂಡು ಪಡೆದುಕೊಳ್ಳಬೇಕು. ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>