<p><strong>ಕೊಪ್ಪಳ</strong>: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಅವರನ್ನು ಭೇಟಿಯಾಗಲು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನಗರಕ್ಕೆ ಭೇಟಿ ನೀಡಿದ್ದಾರೆ.</p><p>ಗುರುವಾರ ರಾತ್ರಿ ಸಂಸದರ ನಿವಾಸಕ್ಕೆ ಬಂದ ಅವರನ್ನು ಸಂಗಣ್ಣ ಕರಡಿ ಬರಮಾಡಿಕೊಂಡು ಸ್ವಾಗತ ಕೋರಿದರು. ಬಳಿಕ ಸಂಗಣ್ಣ ಜೊತೆ ರವಿಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದರು.</p><p>ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಣಗಣ್ಣನವರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಹಲವರು ಇದ್ದರು.</p><p>ದಿಢೀರ್ ಕೊಪ್ಪಳ ಭೇಟಿ ವಿಶೇಷ ಎನು ಎನ್ನುವ ಪ್ರಶ್ನೆಗೆ ರವಿಕುಮಾರ್ ನಕ್ಕು ಸುಮ್ಮನಾದರು.</p><p>ಸತತ ಎರಡು ಬಾರಿ ಸಂಸದನಾಗಿ ಉತ್ತಮ ಕೆಲಸ ಮಾಡಿದರೂ ಪಕ್ಷ ಟಿಕೆಟ್ ನೀಡಿಲ್ಲ ಎಂದು ರಾಜ್ಯ ನಾಯಕರ ವಿರುದ್ಧ ಸಂಗಣ್ಣ ವಾಗ್ದಾಳಿ ನಡೆಸಿದ್ದರು. ಬೆಳಿಗ್ಗೆ ಬೆಂಬಲಿಗರ ಹಾಗೂ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಸಿ ನಾಲ್ಕು ದಿನ ಕಾದು ನೋಡುವುದಾಗಿ ಹೇಳಿದ್ದಾರೆ. ಈ ಎಲ್ಲ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ರವಿಕುಮಾರ್ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ದಿಢೀರ್ ಸಂಸದರ ನಿವಾಸಕ್ಕೆ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಅವರನ್ನು ಭೇಟಿಯಾಗಲು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನಗರಕ್ಕೆ ಭೇಟಿ ನೀಡಿದ್ದಾರೆ.</p><p>ಗುರುವಾರ ರಾತ್ರಿ ಸಂಸದರ ನಿವಾಸಕ್ಕೆ ಬಂದ ಅವರನ್ನು ಸಂಗಣ್ಣ ಕರಡಿ ಬರಮಾಡಿಕೊಂಡು ಸ್ವಾಗತ ಕೋರಿದರು. ಬಳಿಕ ಸಂಗಣ್ಣ ಜೊತೆ ರವಿಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದರು.</p><p>ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಣಗಣ್ಣನವರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಹಲವರು ಇದ್ದರು.</p><p>ದಿಢೀರ್ ಕೊಪ್ಪಳ ಭೇಟಿ ವಿಶೇಷ ಎನು ಎನ್ನುವ ಪ್ರಶ್ನೆಗೆ ರವಿಕುಮಾರ್ ನಕ್ಕು ಸುಮ್ಮನಾದರು.</p><p>ಸತತ ಎರಡು ಬಾರಿ ಸಂಸದನಾಗಿ ಉತ್ತಮ ಕೆಲಸ ಮಾಡಿದರೂ ಪಕ್ಷ ಟಿಕೆಟ್ ನೀಡಿಲ್ಲ ಎಂದು ರಾಜ್ಯ ನಾಯಕರ ವಿರುದ್ಧ ಸಂಗಣ್ಣ ವಾಗ್ದಾಳಿ ನಡೆಸಿದ್ದರು. ಬೆಳಿಗ್ಗೆ ಬೆಂಬಲಿಗರ ಹಾಗೂ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಸಿ ನಾಲ್ಕು ದಿನ ಕಾದು ನೋಡುವುದಾಗಿ ಹೇಳಿದ್ದಾರೆ. ಈ ಎಲ್ಲ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ರವಿಕುಮಾರ್ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ದಿಢೀರ್ ಸಂಸದರ ನಿವಾಸಕ್ಕೆ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>