<p><strong>ಕುಕನೂರು (ಕೊಪ್ಪಳ ಜಿಲ್ಲೆ):</strong> ‘ರಾಜ್ಯ ಸರ್ಕಾರದ 25 ಜನ ಸಚಿವರನ್ನು ತೆಗೆದು ಹೊಸಬರಿಗೆ ಅವಕಾಶ ಕೊಡಬೇಕು’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.</p><p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹೊಸಬರಿಗೆ ಅವಕಾಶ ಕೊಟ್ಟರೆ ಅವರಿಗೂ ಅನುಭವವಾಗುತ್ತದೆ. ಇರುವವರೇ ಕಾಯಂ ಆಗಿ ಇರಬೇಕು ಎಂದರೆ ಹೇಗೆ ಸಾಧ್ಯವಾಗುತ್ತದೆ. ಹೊಸಬರು ಅವಕಾಶ ಕೇಳುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p><p>‘ನಾನು ಹೆಚ್ಚು ಬಾರಿ ಶಾಸಕನಾಗಿದ್ದರೂ ಮಂತ್ರಿ ಸ್ಥಾನ ಕೊಟ್ಟಿಲ್ಲ. ಆರ್ಥಿಕ ಸಲಹೆಗಾರ ಎನ್ನುವ ಹುದ್ದೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಉತ್ತಮ ಬಜೆಟ್ ಕೊಡಬಹುದೇ ವಿನಃ ಯಾವುದೇ ಅಧಿಕಾರ ಇರುವುದಿಲ್ಲ. ನನ್ನನ್ನು ಸಚಿವನನ್ನಾಗಿ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದರು.</p><p>‘ಮೇ 4ರ ಬಳಿಕ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಪಕ್ಷದ ವರಿಷ್ಠರು ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ಮಾಡುತ್ತಾರೆ. ಅಗತ್ಯವಿದ್ದರೆ ಬದಲಾವಣೆ ಮಾಡುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು (ಕೊಪ್ಪಳ ಜಿಲ್ಲೆ):</strong> ‘ರಾಜ್ಯ ಸರ್ಕಾರದ 25 ಜನ ಸಚಿವರನ್ನು ತೆಗೆದು ಹೊಸಬರಿಗೆ ಅವಕಾಶ ಕೊಡಬೇಕು’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.</p><p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹೊಸಬರಿಗೆ ಅವಕಾಶ ಕೊಟ್ಟರೆ ಅವರಿಗೂ ಅನುಭವವಾಗುತ್ತದೆ. ಇರುವವರೇ ಕಾಯಂ ಆಗಿ ಇರಬೇಕು ಎಂದರೆ ಹೇಗೆ ಸಾಧ್ಯವಾಗುತ್ತದೆ. ಹೊಸಬರು ಅವಕಾಶ ಕೇಳುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p><p>‘ನಾನು ಹೆಚ್ಚು ಬಾರಿ ಶಾಸಕನಾಗಿದ್ದರೂ ಮಂತ್ರಿ ಸ್ಥಾನ ಕೊಟ್ಟಿಲ್ಲ. ಆರ್ಥಿಕ ಸಲಹೆಗಾರ ಎನ್ನುವ ಹುದ್ದೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಉತ್ತಮ ಬಜೆಟ್ ಕೊಡಬಹುದೇ ವಿನಃ ಯಾವುದೇ ಅಧಿಕಾರ ಇರುವುದಿಲ್ಲ. ನನ್ನನ್ನು ಸಚಿವನನ್ನಾಗಿ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದರು.</p><p>‘ಮೇ 4ರ ಬಳಿಕ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಪಕ್ಷದ ವರಿಷ್ಠರು ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ಮಾಡುತ್ತಾರೆ. ಅಗತ್ಯವಿದ್ದರೆ ಬದಲಾವಣೆ ಮಾಡುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>