<p><strong>ಹುಲಿಗಿ (ಮುನಿರಾಬಾದ್):</strong> ‘ಸಮಾಜದಲ್ಲಿ ಒಬ್ಬ ವ್ಯಕ್ತಿ ಅಭಿವೃದ್ಧಿ ಹೊಂದುತ್ತಾನೆ ಎಂದರೆ ಅವರಿಗೆ ಪ್ರೋತ್ಸಾಹ ಕೊಟ್ಟು ಮೇಲಕ್ಕೆ ಏರಲು ಸಹಾಯ ಮಾಡಬೇಕು. ಕಾಲಿಡಿದು ಎಳೆಯುವ ಪ್ರವೃತ್ತಿ ನಿಲ್ಲಬೇಕು’ ಎಂದು ಮೈನಳ್ಳಿ ಮಠದ ಸಿದ್ಧೇಶ್ವರ ಶಿವಾಚಾರ್ಯ ಹೇಳಿದರು.</p>.<p>ಹುಲಿಗಿಯಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜೋಳಿಗೆ ಹಿಡಿದು ಮನೆ–ಮನೆಗೆ ತೆರಳಿ ಭಿಕ್ಷೆಬೇಡಿ ದಾಸೋಹದ ಜತೆಗೆ ಶಿಕ್ಷಣ ನೀಡಿದ ನಿಸ್ವಾರ್ಥ ಸಮಾಜ ನಮ್ಮದು. ಸದ್ಯ ಬಡತನ ಮತ್ತು ಅಸಹಾಯಕ ಸ್ಥಿತಿಯಲ್ಲಿದ್ದೇವೆ. ಸಂಘಟನೆಗೊಳ್ಳುವ ಮೂಲಕ ಸರ್ಕಾರದ ಮೀಸಲಾತಿ ಹಕ್ಕನ್ನು ಪಡೆಯಬೇಕು’ ಎಂದು ತಿಳಿಸಿದರು.</p>.<p>ತುಂಗಭದ್ರಾ ಕಾಡಾ ಅಧ್ಯಕ್ಷ ಬಿ.ಎಚ್.ಎಂ ತಿಪ್ಪೇರುದ್ರಸ್ವಾಮಿ ಮಾತನಾಡಿ,‘ಜನ<br />ಸಂಖ್ಯೆಗೆ ಅನುಗುಣವಾಗಿ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ನಮ್ಮ ಸಮಾಜಕ್ಕೆ ಮೀಸಲಾತಿ ಹಕ್ಕು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದರು. ಜಂಗಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಯ್ಯ ಹಿರೇಮಠ ಮಾತನಾಡಿ,‘ಸಮಾಜ ಬಾಂಧವರಿಂದ ದೇಣಿಗೆ ಸಂಗ್ರಹಿಸಿ ಸುಮಾರು ₹80 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಿದ್ದೇವೆ. ಸಂಘಟನೆ ಮೂಲಕ ಏನನ್ನು ಬೇಕಾದರೂ ಸಾಧಿಸಬಹುದು. ತಿಂಗಳಿಗೊಮ್ಮೆ ಸಭೆ ಸೇರುವ ಮೂಲಕ ಸಂಘಟನೆಗೆ ಮುಂದಾಗಿ’ ಎಂದರು.</p>.<p>ಶಹಾಪುರ ಗ್ರಾಮದ ಉದ್ಯಮಿ ಗಿರೀಶ್ ಹಿರೇಮಠ, ಕೊಟ್ರಯ್ಯ ಸ್ವಾಮಿ ಮಾತನಾಡಿದರು.</p>.<p>ಷಟಸ್ಥಲ ಧ್ವಜಾರೋಹಣದ ನಂತರ ಬೆಳಿಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ನಡೆಯಿತು.</p>.<p>ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ನಂದಿಪುರ ಮಠದ ಡಾ.ಮಹೇಶ್ವರ ಶಿವಾಚಾರ್ಯರು ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಕಂಪಸಾಗರದ ನಾಗಯ್ಯಸ್ವಾಮಿ ಹಿರೇಮಠ, ಸಿದ್ದರಾಮಯ್ಯ ಸ್ವಾಮಿ, ಸಂಗಾಪುರ ಮಠ, ಹಂಪಯ್ಯ ಸ್ವಾಮಿ ಬನ್ನಿಮಠ ಹಾಗೂ ಕಾಶಯ್ಯಸ್ವಾಮಿ ಇದ್ದರು. ವೀರಭದ್ರಯ್ಯ ಭೂಸನೂರಮಠ ಸ್ವಾಗತಿಸಿ, ನಿರೂಪಿಸಿದರು. ಶಿವಪ್ರಕಾಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಿಗಿ (ಮುನಿರಾಬಾದ್):</strong> ‘ಸಮಾಜದಲ್ಲಿ ಒಬ್ಬ ವ್ಯಕ್ತಿ ಅಭಿವೃದ್ಧಿ ಹೊಂದುತ್ತಾನೆ ಎಂದರೆ ಅವರಿಗೆ ಪ್ರೋತ್ಸಾಹ ಕೊಟ್ಟು ಮೇಲಕ್ಕೆ ಏರಲು ಸಹಾಯ ಮಾಡಬೇಕು. ಕಾಲಿಡಿದು ಎಳೆಯುವ ಪ್ರವೃತ್ತಿ ನಿಲ್ಲಬೇಕು’ ಎಂದು ಮೈನಳ್ಳಿ ಮಠದ ಸಿದ್ಧೇಶ್ವರ ಶಿವಾಚಾರ್ಯ ಹೇಳಿದರು.</p>.<p>ಹುಲಿಗಿಯಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜೋಳಿಗೆ ಹಿಡಿದು ಮನೆ–ಮನೆಗೆ ತೆರಳಿ ಭಿಕ್ಷೆಬೇಡಿ ದಾಸೋಹದ ಜತೆಗೆ ಶಿಕ್ಷಣ ನೀಡಿದ ನಿಸ್ವಾರ್ಥ ಸಮಾಜ ನಮ್ಮದು. ಸದ್ಯ ಬಡತನ ಮತ್ತು ಅಸಹಾಯಕ ಸ್ಥಿತಿಯಲ್ಲಿದ್ದೇವೆ. ಸಂಘಟನೆಗೊಳ್ಳುವ ಮೂಲಕ ಸರ್ಕಾರದ ಮೀಸಲಾತಿ ಹಕ್ಕನ್ನು ಪಡೆಯಬೇಕು’ ಎಂದು ತಿಳಿಸಿದರು.</p>.<p>ತುಂಗಭದ್ರಾ ಕಾಡಾ ಅಧ್ಯಕ್ಷ ಬಿ.ಎಚ್.ಎಂ ತಿಪ್ಪೇರುದ್ರಸ್ವಾಮಿ ಮಾತನಾಡಿ,‘ಜನ<br />ಸಂಖ್ಯೆಗೆ ಅನುಗುಣವಾಗಿ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ನಮ್ಮ ಸಮಾಜಕ್ಕೆ ಮೀಸಲಾತಿ ಹಕ್ಕು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದರು. ಜಂಗಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಯ್ಯ ಹಿರೇಮಠ ಮಾತನಾಡಿ,‘ಸಮಾಜ ಬಾಂಧವರಿಂದ ದೇಣಿಗೆ ಸಂಗ್ರಹಿಸಿ ಸುಮಾರು ₹80 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಿದ್ದೇವೆ. ಸಂಘಟನೆ ಮೂಲಕ ಏನನ್ನು ಬೇಕಾದರೂ ಸಾಧಿಸಬಹುದು. ತಿಂಗಳಿಗೊಮ್ಮೆ ಸಭೆ ಸೇರುವ ಮೂಲಕ ಸಂಘಟನೆಗೆ ಮುಂದಾಗಿ’ ಎಂದರು.</p>.<p>ಶಹಾಪುರ ಗ್ರಾಮದ ಉದ್ಯಮಿ ಗಿರೀಶ್ ಹಿರೇಮಠ, ಕೊಟ್ರಯ್ಯ ಸ್ವಾಮಿ ಮಾತನಾಡಿದರು.</p>.<p>ಷಟಸ್ಥಲ ಧ್ವಜಾರೋಹಣದ ನಂತರ ಬೆಳಿಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ನಡೆಯಿತು.</p>.<p>ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ನಂದಿಪುರ ಮಠದ ಡಾ.ಮಹೇಶ್ವರ ಶಿವಾಚಾರ್ಯರು ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಕಂಪಸಾಗರದ ನಾಗಯ್ಯಸ್ವಾಮಿ ಹಿರೇಮಠ, ಸಿದ್ದರಾಮಯ್ಯ ಸ್ವಾಮಿ, ಸಂಗಾಪುರ ಮಠ, ಹಂಪಯ್ಯ ಸ್ವಾಮಿ ಬನ್ನಿಮಠ ಹಾಗೂ ಕಾಶಯ್ಯಸ್ವಾಮಿ ಇದ್ದರು. ವೀರಭದ್ರಯ್ಯ ಭೂಸನೂರಮಠ ಸ್ವಾಗತಿಸಿ, ನಿರೂಪಿಸಿದರು. ಶಿವಪ್ರಕಾಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>