ಮನುಷ್ಯ ಬಾಹ್ಯವಾಗಿ ಪ್ರಗತಿ ಸಾಧಿಸುತ್ತಿದ್ದರೂ ಆಂತರಿಕವಾಗಿ ಕುಬ್ಜನಾಗುತ್ತಿದ್ದಾನೆ. ವಿದ್ಯಾವಂತರೇ ಧರ್ಮ, ಭಾಷೆ, ಇನ್ನಿತರ ಹೆಸರಲ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಭಾಷಾ, ಧರ್ಮ ಪ್ರೇಮಕ್ಕಿಂತ ರಾಷ್ಟ್ರಪ್ರೇಮ ದೊಡ್ಡದು ಎನ್ನುವುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ರಾಷ್ಟ್ರೀಯ ಹಬ್ಬಗಳು ನಾವು ಆಚರಿಸುವ ಹಬ್ಬ, ಉತ್ಸವಗಳಂತೆ ಸಂಭ್ರಮದಿಂದ ಆಚರಿಸಬೇಕು ಎಂದರು.