<p><strong>ಕೊಪ್ಪಳ: </strong>ಸೆ. 21ರಂದು ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳ ಕುರಿತು ಧ್ವನಿ ಎತ್ತಬೇಕು ಎಂದು ಒತ್ತಾಯಿಸಿರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯತು ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ನಿರ್ಲಕ್ಷಿಸಿದರೆ ಮತ್ತೆ ಹೋರಾಟಕ್ಕಿಳಿಯಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ಸೆ. 22ರಂದು ಜಿಲ್ಲಾ ಮಟ್ಟದಲ್ಲಿ ಸೆ. 23ರಂದು ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮನವಿ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ 10ರಿಂದ 29ರ ವರೆಗೆ ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲಾಗಿತ್ತು. ಆಗ ಸಚಿವರು ಇನ್ನೂ ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ<br />ಮುಷ್ಕರ ಮುಗಿದು 49 ದಿನಗಳು ಕಳೆದರೂ ಯಾವ ಅಧಿಕೃತ ಆದೇಶ ಇಲ್ಲಿವರೆಗೂ ಹೊರಬಿದ್ದಿಲ್ಲ. ಆದ್ದರಿಂದ ಈಗ ಮತ್ತೆ ಆಶಾ ಕಾರ್ಯಕರ್ತೆಯರು ಹೋರಾಟ ಕ್ಕಿಳಿಯುವುದು ಅನಿವಾರ್ಯವಾಗಿದೆ ಎಂದು ಮನವಿ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ₹ 12 ಸಾವಿರ ಕೂಡಲೇ ಘೋಷಿಸಬೇಕು. ಬಾಕಿ ಇರುವ ಪ್ರೋತ್ಸಾಹಧನ ಆಶಾ ಕಾರ್ಯಕರ್ತರಿಗೂ ಒದಗಿಸಲು ಕ್ರಮ ಕೈಗೊಳ್ಳಬೇಕು.ಈಗಾಗಲೇ ಘೋಷಿಸಿದ ₹ 3,000 ಕೋವಿಡ್ ಪ್ರೋತ್ಸಾಹಧನ ಇನ್ನೂ ತಲುಪದಿರುವವರಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದುಆಶಾ ಕಾರ್ಯಕರ್ತರು ಒತ್ತಾಯಿಸಿದರು.</p>.<p>ಎಐಯುಟಿಯುಸಿಯ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯಾ ಹಿರೇಗೌಡರ್, ಆಶಾ ಕಾರ್ಯಕರ್ತೆಯರ ಮುಖಂಡರಾದ ಗಿರಿಜಮ್ಮ,ಶಾಂತಮ್ಮ, ಶಾರದಾ, ಅನ್ನಪೂರ್ಣ, ಸುನಿತಾ, ಶಬಾನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸೆ. 21ರಂದು ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳ ಕುರಿತು ಧ್ವನಿ ಎತ್ತಬೇಕು ಎಂದು ಒತ್ತಾಯಿಸಿರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯತು ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ನಿರ್ಲಕ್ಷಿಸಿದರೆ ಮತ್ತೆ ಹೋರಾಟಕ್ಕಿಳಿಯಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ಸೆ. 22ರಂದು ಜಿಲ್ಲಾ ಮಟ್ಟದಲ್ಲಿ ಸೆ. 23ರಂದು ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮನವಿ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ 10ರಿಂದ 29ರ ವರೆಗೆ ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲಾಗಿತ್ತು. ಆಗ ಸಚಿವರು ಇನ್ನೂ ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ<br />ಮುಷ್ಕರ ಮುಗಿದು 49 ದಿನಗಳು ಕಳೆದರೂ ಯಾವ ಅಧಿಕೃತ ಆದೇಶ ಇಲ್ಲಿವರೆಗೂ ಹೊರಬಿದ್ದಿಲ್ಲ. ಆದ್ದರಿಂದ ಈಗ ಮತ್ತೆ ಆಶಾ ಕಾರ್ಯಕರ್ತೆಯರು ಹೋರಾಟ ಕ್ಕಿಳಿಯುವುದು ಅನಿವಾರ್ಯವಾಗಿದೆ ಎಂದು ಮನವಿ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ₹ 12 ಸಾವಿರ ಕೂಡಲೇ ಘೋಷಿಸಬೇಕು. ಬಾಕಿ ಇರುವ ಪ್ರೋತ್ಸಾಹಧನ ಆಶಾ ಕಾರ್ಯಕರ್ತರಿಗೂ ಒದಗಿಸಲು ಕ್ರಮ ಕೈಗೊಳ್ಳಬೇಕು.ಈಗಾಗಲೇ ಘೋಷಿಸಿದ ₹ 3,000 ಕೋವಿಡ್ ಪ್ರೋತ್ಸಾಹಧನ ಇನ್ನೂ ತಲುಪದಿರುವವರಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದುಆಶಾ ಕಾರ್ಯಕರ್ತರು ಒತ್ತಾಯಿಸಿದರು.</p>.<p>ಎಐಯುಟಿಯುಸಿಯ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯಾ ಹಿರೇಗೌಡರ್, ಆಶಾ ಕಾರ್ಯಕರ್ತೆಯರ ಮುಖಂಡರಾದ ಗಿರಿಜಮ್ಮ,ಶಾಂತಮ್ಮ, ಶಾರದಾ, ಅನ್ನಪೂರ್ಣ, ಸುನಿತಾ, ಶಬಾನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>