<p><strong>ಕೊಪ್ಪಳ: </strong>ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.</p>.<p>‘ಸುಮಾರು 3 ತಿಂಗಳಿಂದ ನಮ್ಮ ದುಡಿಯುವ ಜನರು ಕೋವಿಡ್-19 ಲಾಕ್ಡೌನ್ನಿಂದಾಗಿ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಪೂರ್ವಸಿದ್ಧತೆ ಇಲ್ಲದೆ ದೇಶದ ಮೇಲೆ ಹೇರಲಾದ ಈ ನಿಯಮದಿಂದಾಗಿ ದೇಶದ ಕಾರ್ಮಿಕರು, ರೈತರು, ಕೂಲಿಕಾರರು, ವಲಸೆ ಕಾರ್ಮಿಕರು, ಮತ್ತೆಲ್ಲಾ ಗ್ರಾಮೀಣ ಬಡವರು ಅತೀವ ಸಂಕಷ್ಟಗಳಿಗೆ ಬಲಿಯಾಗಿದ್ದಾರೆ.</p>.<p>ಇದನ್ನು ತಡೆಯಲು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಜೂನ್ 4 ರಂದು ದೇಶಾದ್ಯಂತ ಮನವಿ ಸಲ್ಲಿಕೆಗೆ ಕರೆ ನೀಡಿದೆ. ಎಲ್ಲ ಕೂಲಿಕಾರರ ಕುಟುಂಬಗಳ ತಿಂಗಳಿಗೆ ₹ 7,500 ರಂತೆ ಕನಿಷ್ಟ 3 ತಿಂಗಳಿಗೆ ಆರ್ಥಿಕ ನೆರವು ನೀಡಬೇಕು. ಕೇರಳ ಮಾದರಿಯಲ್ಲಿ ಗುರುತಿನ ಚೀಟಿಗಳನ್ನು ವಿತರಿಸಬೇಕು.ವಲಸೆ ಕಾರ್ಮಿಕರ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಅಪಘಾತ, ಹಸಿವೆಯಿಂದ ಮತ್ತು ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕರ ಅವಲಂಬಿತರಿಗೆ ಗರಿಷ್ಠ ಪರಿಹಾರ ನೀಡಬೇಕು.</p>.<p>ದಿನವೊಂದಕ್ಕೆ ₹ 600 ದರದಲ್ಲಿ ವರ್ಷದಲ್ಲಿ 200 ದಿನಗಳ ಉದ್ಯೋಗ ಖಾತ್ರಿ ಕೆಲಸ ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಗಾಗಿ ಹೆಚ್ಚುವರಿಯಾಗಿ ₹ 1 ಲಕ್ಷ ಕೋಟಿ ಅನುದಾನ ನೀಡಬೇಕು.ಪ್ರತಿ ಕೂಲಿಕಾರರ ಕುಟುಂಬಕ್ಕೆ ಮುಂದಿನ 6 ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ ಅಥವಾ ಗೋದಿ ಮತ್ತು ಇತರ ಅಗತ್ಯ ವಸ್ತುಗಳನ್ನು ಉಚಿತವಾಗಿ ಯಾವುದೆ ರೇಷನ್ ಕಾರ್ಡ್ ಷರತ್ತುಗಳನ್ನು ವಿಧಿಸದೆ ನೀಡಬೇಕು.ಎಲ್ಲಾ ಬಡವರಿಗೆ ಮುಖ್ಯವಾಗಿ ಗ್ರಾಮೀಣ ಜನತೆಗೆ ಆರೋಗ್ಯ ತಪಾಸಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ರಾಜ್ಯಾಧ್ಯಕ್ಷನಿತ್ಯಾನಂದ ಸ್ವಾಮಿ, ಉಪಾಧ್ಯಕ್ಷ ಗಂಗಾಧರಯ್ಯ ಸ್ವಾಮಿ, ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಸುಂಕಪ್ಪ ಗದಗ,ಬಸವಾರಾಜ್,ಬಾಳಪ್ಪ ಹುಲಿ ಹೈದರ್, ಹುಸೇನಪ್ಪ ಕೆ., ಅಂದಪ್ಪ ಬರದೂರ,ರಮೇಶ ಬಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.</p>.<p>‘ಸುಮಾರು 3 ತಿಂಗಳಿಂದ ನಮ್ಮ ದುಡಿಯುವ ಜನರು ಕೋವಿಡ್-19 ಲಾಕ್ಡೌನ್ನಿಂದಾಗಿ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಪೂರ್ವಸಿದ್ಧತೆ ಇಲ್ಲದೆ ದೇಶದ ಮೇಲೆ ಹೇರಲಾದ ಈ ನಿಯಮದಿಂದಾಗಿ ದೇಶದ ಕಾರ್ಮಿಕರು, ರೈತರು, ಕೂಲಿಕಾರರು, ವಲಸೆ ಕಾರ್ಮಿಕರು, ಮತ್ತೆಲ್ಲಾ ಗ್ರಾಮೀಣ ಬಡವರು ಅತೀವ ಸಂಕಷ್ಟಗಳಿಗೆ ಬಲಿಯಾಗಿದ್ದಾರೆ.</p>.<p>ಇದನ್ನು ತಡೆಯಲು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಜೂನ್ 4 ರಂದು ದೇಶಾದ್ಯಂತ ಮನವಿ ಸಲ್ಲಿಕೆಗೆ ಕರೆ ನೀಡಿದೆ. ಎಲ್ಲ ಕೂಲಿಕಾರರ ಕುಟುಂಬಗಳ ತಿಂಗಳಿಗೆ ₹ 7,500 ರಂತೆ ಕನಿಷ್ಟ 3 ತಿಂಗಳಿಗೆ ಆರ್ಥಿಕ ನೆರವು ನೀಡಬೇಕು. ಕೇರಳ ಮಾದರಿಯಲ್ಲಿ ಗುರುತಿನ ಚೀಟಿಗಳನ್ನು ವಿತರಿಸಬೇಕು.ವಲಸೆ ಕಾರ್ಮಿಕರ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಅಪಘಾತ, ಹಸಿವೆಯಿಂದ ಮತ್ತು ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕರ ಅವಲಂಬಿತರಿಗೆ ಗರಿಷ್ಠ ಪರಿಹಾರ ನೀಡಬೇಕು.</p>.<p>ದಿನವೊಂದಕ್ಕೆ ₹ 600 ದರದಲ್ಲಿ ವರ್ಷದಲ್ಲಿ 200 ದಿನಗಳ ಉದ್ಯೋಗ ಖಾತ್ರಿ ಕೆಲಸ ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಗಾಗಿ ಹೆಚ್ಚುವರಿಯಾಗಿ ₹ 1 ಲಕ್ಷ ಕೋಟಿ ಅನುದಾನ ನೀಡಬೇಕು.ಪ್ರತಿ ಕೂಲಿಕಾರರ ಕುಟುಂಬಕ್ಕೆ ಮುಂದಿನ 6 ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ ಅಥವಾ ಗೋದಿ ಮತ್ತು ಇತರ ಅಗತ್ಯ ವಸ್ತುಗಳನ್ನು ಉಚಿತವಾಗಿ ಯಾವುದೆ ರೇಷನ್ ಕಾರ್ಡ್ ಷರತ್ತುಗಳನ್ನು ವಿಧಿಸದೆ ನೀಡಬೇಕು.ಎಲ್ಲಾ ಬಡವರಿಗೆ ಮುಖ್ಯವಾಗಿ ಗ್ರಾಮೀಣ ಜನತೆಗೆ ಆರೋಗ್ಯ ತಪಾಸಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ರಾಜ್ಯಾಧ್ಯಕ್ಷನಿತ್ಯಾನಂದ ಸ್ವಾಮಿ, ಉಪಾಧ್ಯಕ್ಷ ಗಂಗಾಧರಯ್ಯ ಸ್ವಾಮಿ, ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಸುಂಕಪ್ಪ ಗದಗ,ಬಸವಾರಾಜ್,ಬಾಳಪ್ಪ ಹುಲಿ ಹೈದರ್, ಹುಸೇನಪ್ಪ ಕೆ., ಅಂದಪ್ಪ ಬರದೂರ,ರಮೇಶ ಬಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>