ಈ ಕಾರ್ಖಾನೆ ಕಳೆದ ಎರಡೂವರೆ ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವೇ ವ್ಯಕ್ತಿಗಳ ಕುಮ್ಮಕ್ಕಿನಿಂದ ಗ್ರಾಮ ಪಂಚಾಯಿತಿ ಕಾರ್ಖಾನೆಗೆ ನಿರಪೇಕ್ಷಣಾ ಪತ್ರ (ಎನ್ಒಸಿ) ನೀಡುತ್ತಿಲ್ಲ. ಕಾರ್ಖಾನೆಯಲ್ಲಿ ಈ ಭಾಗದ ಸುಮಾರು ಎರಡು ನೂರು ಜನ ಕಾರ್ಮಿಕರಿಗೆ ಉದ್ಯೋಗ ದೊರಕಿದ್ದು, ಒಂದೊಮ್ಮೆ ಅದು ಕೆಲಸ ಸ್ಥಗಿತಗೊಳಿಸಿದರೆ ನೂರಾರು ಜನ ಕಾರ್ಮಿಕರು ಬೀದಿಪಾಲಾಗಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.