<p><strong>ಗಂಗಾವತಿ</strong>: ತಾಲ್ಲೂಕಿನ ಬಸಾಪಟ್ಟಣ ಗ್ರಾಮದ ಬಸ್ ನಿಲ್ದಾಣದೊಳಗೆ ಗದಗ-ಕೊಪ್ಪಳ-ಗಂಗಾವತಿ, ಗಂಗಾವತಿ-ಕೊಪ್ಪಳ-ಗದಗ-ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಗಳನ್ನು ನಿಲ್ಲಿಸದೇ ಇದ್ದುದನ್ನು ಖಂಡಿಸಿ, ಶುಕ್ರವಾರ ಕರ್ನಾಟಕ ರಾಷ್ಟ್ರೀಯ ಪಕ್ಷದ ನೇತೃತ್ವದಲ್ಲಿ ಗ್ರಾಮಸ್ಥರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕೆ.ಆರ್.ಎಸ್ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ನಿರುಪಾದಿ ಕೆ. ಗೊಮರ್ಸಿ ಮಾತನಾಡಿ, ಬಸಾಪಟ್ಟಣ ಗ್ರಾಮದಲ್ಲಿ ₹ 90 ಲಕ್ಷ ಖರ್ಚು ಮಾಡಿ, ಬಸ್ ನಿಲ್ದಾಣ ನಿರ್ಮಿಸಿದ್ದು, ನಿಲ್ದಾಣದ ಒಳಗಡೆ ಬಸ್ಗಳೇ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಿಲ್ದಾಣ ಬಿಟ್ಟು ರಸ್ತೆಗೆ ಬಂದು ಬಸ್ ನಿಲ್ಲಿಸಿ ಎಂದರೂ ನಿಲ್ಲಿಸುತ್ತಿಲ್ಲ. ಬದಲಾಗಿ ದೂರ ಸಂಚರಿಸುವ ಬಸ್ಗಳಾಗಿದ್ದು, ಇಲ್ಲಿ ನಿಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ವಾಹನ ಚಾಲಕರು, ನಿರ್ವಾಹಕರು ಹೇಳುತ್ತಿದ್ದರು. ಇದೇ ವಿಷಯವನ್ನು ಘಟಕದ ವ್ಯವಸ್ಥಾಪಕರಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದರು.</p>.<p>ನಂತರ ಕೆ.ಆರ್.ಎಸ್ ಪಕ್ಷದ ನೇತೃತ್ವದಲ್ಲಿ ಗ್ರಾಮಸ್ಥರು ಮುಖ್ಯರಸ್ತೆಗೆ ನಿಂತು ಬಸ್ ಒಂದನ್ನು ತಡೆದು ಬಸಾಪಟ್ಟಣ ಬಸ್ ನಿಲ್ದಾಣದ ಒಳಗಡೆ ಕಳುಹಿಸಿ, ಮುಂದಕ್ಕೆ ಸಂಚರಿಸದಂತೆ ಕೆಲ ನಿಮಿಷಗಳ ಕಾಲ ತಡೆಯಲಾಯಿತು.</p>.<p>ಘಟನೆ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಸ್ ಡಿಪೋ ವ್ಯವಸ್ಥಾಪಕ, ಪೊಲೀಸ್ ಸಿಬ್ಬಂದಿ ಬಸ್ ನಿಲುಗಡೆ ಹಾಗೂ ಬಸ್ ನಿಲ್ದಾಣಕ್ಕೆ ಮೂಲಸೌಕರ್ಯ ಒದಗಿಸುವ ಬಗ್ಗೆ ಮನವಿ ಪಡೆದು, 20 ದಿನಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.</p>.<p>ಕೊಪ್ಪಳ ರೈತ ಘಟಕದ ಅಧ್ಯಕ್ಷ ಕನಕಪ್ಪ ಹುಡೇಜಾಲಿ, ಸಂಘಟನಾ ಕಾರ್ಯದರ್ಶಿ ಗಣೇಶ, ಹನುಮಂತಪ್ಪ ಗೊಡಚಳ್ಳಿ, ಬಸವರಾಜ ಬಿಜಕಲ್, ಅಶಾ ವಿರೇಶ, ಮೆಹಬೂಬ, ಮೈನೂದ್ದೀನ್, ಮೆಹಬೂಬ್, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಬಸಾಪಟ್ಟಣ ಗ್ರಾಮದ ಬಸ್ ನಿಲ್ದಾಣದೊಳಗೆ ಗದಗ-ಕೊಪ್ಪಳ-ಗಂಗಾವತಿ, ಗಂಗಾವತಿ-ಕೊಪ್ಪಳ-ಗದಗ-ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಗಳನ್ನು ನಿಲ್ಲಿಸದೇ ಇದ್ದುದನ್ನು ಖಂಡಿಸಿ, ಶುಕ್ರವಾರ ಕರ್ನಾಟಕ ರಾಷ್ಟ್ರೀಯ ಪಕ್ಷದ ನೇತೃತ್ವದಲ್ಲಿ ಗ್ರಾಮಸ್ಥರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕೆ.ಆರ್.ಎಸ್ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ನಿರುಪಾದಿ ಕೆ. ಗೊಮರ್ಸಿ ಮಾತನಾಡಿ, ಬಸಾಪಟ್ಟಣ ಗ್ರಾಮದಲ್ಲಿ ₹ 90 ಲಕ್ಷ ಖರ್ಚು ಮಾಡಿ, ಬಸ್ ನಿಲ್ದಾಣ ನಿರ್ಮಿಸಿದ್ದು, ನಿಲ್ದಾಣದ ಒಳಗಡೆ ಬಸ್ಗಳೇ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಿಲ್ದಾಣ ಬಿಟ್ಟು ರಸ್ತೆಗೆ ಬಂದು ಬಸ್ ನಿಲ್ಲಿಸಿ ಎಂದರೂ ನಿಲ್ಲಿಸುತ್ತಿಲ್ಲ. ಬದಲಾಗಿ ದೂರ ಸಂಚರಿಸುವ ಬಸ್ಗಳಾಗಿದ್ದು, ಇಲ್ಲಿ ನಿಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ವಾಹನ ಚಾಲಕರು, ನಿರ್ವಾಹಕರು ಹೇಳುತ್ತಿದ್ದರು. ಇದೇ ವಿಷಯವನ್ನು ಘಟಕದ ವ್ಯವಸ್ಥಾಪಕರಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದರು.</p>.<p>ನಂತರ ಕೆ.ಆರ್.ಎಸ್ ಪಕ್ಷದ ನೇತೃತ್ವದಲ್ಲಿ ಗ್ರಾಮಸ್ಥರು ಮುಖ್ಯರಸ್ತೆಗೆ ನಿಂತು ಬಸ್ ಒಂದನ್ನು ತಡೆದು ಬಸಾಪಟ್ಟಣ ಬಸ್ ನಿಲ್ದಾಣದ ಒಳಗಡೆ ಕಳುಹಿಸಿ, ಮುಂದಕ್ಕೆ ಸಂಚರಿಸದಂತೆ ಕೆಲ ನಿಮಿಷಗಳ ಕಾಲ ತಡೆಯಲಾಯಿತು.</p>.<p>ಘಟನೆ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಸ್ ಡಿಪೋ ವ್ಯವಸ್ಥಾಪಕ, ಪೊಲೀಸ್ ಸಿಬ್ಬಂದಿ ಬಸ್ ನಿಲುಗಡೆ ಹಾಗೂ ಬಸ್ ನಿಲ್ದಾಣಕ್ಕೆ ಮೂಲಸೌಕರ್ಯ ಒದಗಿಸುವ ಬಗ್ಗೆ ಮನವಿ ಪಡೆದು, 20 ದಿನಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.</p>.<p>ಕೊಪ್ಪಳ ರೈತ ಘಟಕದ ಅಧ್ಯಕ್ಷ ಕನಕಪ್ಪ ಹುಡೇಜಾಲಿ, ಸಂಘಟನಾ ಕಾರ್ಯದರ್ಶಿ ಗಣೇಶ, ಹನುಮಂತಪ್ಪ ಗೊಡಚಳ್ಳಿ, ಬಸವರಾಜ ಬಿಜಕಲ್, ಅಶಾ ವಿರೇಶ, ಮೆಹಬೂಬ, ಮೈನೂದ್ದೀನ್, ಮೆಹಬೂಬ್, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>