<p><strong>ಕುಕನೂರು:</strong> ಕಾರ್ಮಿಕರು ದೇಶದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾರೆ. ಅವರ ಶ್ರಮವನ್ನು ನಾವೆಲ್ಲರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗನಾಥಸ್ವಾಮಿ ಜೆ. ಹೇಳಿದರು.</p>.<p>ತಾಲ್ಲೂಕಿನ ತಳಕಲ್ ಗ್ರಾಮದ ಅಬ್ದುಲ್ ನಜೀರಸಾಬ್ ಸಮುದಾಯ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಕಾರ್ಮಿಕರ ಮೇಲೆ ಇದ್ದ ದೌರ್ಜನ್ಯ ಮತ್ತು ಹೆಚ್ಚು ಕೆಲಸದ ಸಮಯ ಹಾಗೂ ಕಿರುಕುಳ ಇಂತಹ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಅನೇಕ ಸಂಘಟನೆಗಳು ಹುಟ್ಟಿಕೊಂಡಿವೆ’ ಎಂದರು.</p>.<p>ಕಾರ್ಮಿಕ ಇಲಾಖೆಯಿಂದಲೂ ಕಟ್ಟಡ ಕಾರ್ಮಿಕರಿಗೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಂಡು ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.</p>.<p>ಮಕ್ಕಳನ್ನು ಯಾರೂ ಕೆಲಸಕ್ಕೆ ಬಳಸಿಕೊಳ್ಳಬಾರದು. ಅವರನ್ನು ಶಿಕ್ಷಣವಂತರನ್ನಾಗಿ ಮಾಡಿ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು.</p>.<p>ವಕೀಲ ಮಲ್ಲನಗೌಡ ಎಸ್. ಪಾಟೀಲ ಮಾತನಾಡಿ, ‘ದೇಶದ ಬಹುತೇಕ ಜನಸಂಖ್ಯೆ ಕಾರ್ಮಿಕರಿದ್ದಾರೆ. ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕರಿಗೆ ಉಪಯುಕ್ತ ಯೋಜನೆಗಳನ್ನು ರೂಪಿಸಿ ಸಹಾಯಧನ ನೀಡುತ್ತಿದೆ. ಈ ಯೋಜನೆಗಳ ಉಪಯೋಗ ಪಡೆದುಕೊಳ್ಳಿ ಹಾಗೂ ಕನಿಷ್ಠ ವೇತನ ತಮಗೆ ಮಾಲೀಕರು ನೀಡದಿದ್ದರೆ ತಾವುಗಳು ಕಾರ್ಮಿಕ ಇಲಾಖೆಗೆ ಸಂಪರ್ಕಿಸಿ ನ್ಯಾಯಯುತ ವೇತನ ಪಡೆಯುವ ಹಕ್ಕನ್ನು ಪಡೆದುಕೊಳ್ಳಬಹುದು’ ಎಂದರು.</p>.<p>ಗ್ರಾ.ಪಂ ಅಧ್ಯಕ್ಷ ಜಹೀರಾ ಬೇಗಂ, ಕಲ್ಯಾಣ ಕರ್ನಾಟಕ ಒಕ್ಕೂಟ ಸಂಘದ ಅಧ್ಯಕ್ಷ ರಮೇಶ ಘೋರ್ಪಡೆ, ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಮಹಾಂತೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ಕಾರ್ಮಿಕರು ದೇಶದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾರೆ. ಅವರ ಶ್ರಮವನ್ನು ನಾವೆಲ್ಲರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗನಾಥಸ್ವಾಮಿ ಜೆ. ಹೇಳಿದರು.</p>.<p>ತಾಲ್ಲೂಕಿನ ತಳಕಲ್ ಗ್ರಾಮದ ಅಬ್ದುಲ್ ನಜೀರಸಾಬ್ ಸಮುದಾಯ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಕಾರ್ಮಿಕರ ಮೇಲೆ ಇದ್ದ ದೌರ್ಜನ್ಯ ಮತ್ತು ಹೆಚ್ಚು ಕೆಲಸದ ಸಮಯ ಹಾಗೂ ಕಿರುಕುಳ ಇಂತಹ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಅನೇಕ ಸಂಘಟನೆಗಳು ಹುಟ್ಟಿಕೊಂಡಿವೆ’ ಎಂದರು.</p>.<p>ಕಾರ್ಮಿಕ ಇಲಾಖೆಯಿಂದಲೂ ಕಟ್ಟಡ ಕಾರ್ಮಿಕರಿಗೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಂಡು ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.</p>.<p>ಮಕ್ಕಳನ್ನು ಯಾರೂ ಕೆಲಸಕ್ಕೆ ಬಳಸಿಕೊಳ್ಳಬಾರದು. ಅವರನ್ನು ಶಿಕ್ಷಣವಂತರನ್ನಾಗಿ ಮಾಡಿ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು.</p>.<p>ವಕೀಲ ಮಲ್ಲನಗೌಡ ಎಸ್. ಪಾಟೀಲ ಮಾತನಾಡಿ, ‘ದೇಶದ ಬಹುತೇಕ ಜನಸಂಖ್ಯೆ ಕಾರ್ಮಿಕರಿದ್ದಾರೆ. ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕರಿಗೆ ಉಪಯುಕ್ತ ಯೋಜನೆಗಳನ್ನು ರೂಪಿಸಿ ಸಹಾಯಧನ ನೀಡುತ್ತಿದೆ. ಈ ಯೋಜನೆಗಳ ಉಪಯೋಗ ಪಡೆದುಕೊಳ್ಳಿ ಹಾಗೂ ಕನಿಷ್ಠ ವೇತನ ತಮಗೆ ಮಾಲೀಕರು ನೀಡದಿದ್ದರೆ ತಾವುಗಳು ಕಾರ್ಮಿಕ ಇಲಾಖೆಗೆ ಸಂಪರ್ಕಿಸಿ ನ್ಯಾಯಯುತ ವೇತನ ಪಡೆಯುವ ಹಕ್ಕನ್ನು ಪಡೆದುಕೊಳ್ಳಬಹುದು’ ಎಂದರು.</p>.<p>ಗ್ರಾ.ಪಂ ಅಧ್ಯಕ್ಷ ಜಹೀರಾ ಬೇಗಂ, ಕಲ್ಯಾಣ ಕರ್ನಾಟಕ ಒಕ್ಕೂಟ ಸಂಘದ ಅಧ್ಯಕ್ಷ ರಮೇಶ ಘೋರ್ಪಡೆ, ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಮಹಾಂತೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>