<p>ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯ ಪ್ರವೇಶಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.</p>.<p>ವಾರಾಂತ್ಯದಲ್ಲಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯ ವೀಕ್ಷಕರು ಬರುತ್ತಿದ್ದರು. ಹಾಗೆ ಬಂದ ಪ್ರವಾಸಿಗರು ದಡಕ್ಕೆ ಅಪ್ಪಳಿಸುವ ತೆರೆಗಳಿಗೆ ಮೈಯೊಡ್ಡಿ ನಿಲ್ಲುವುದು, ನೀರಲ್ಲಿ ನಿಂತುಕೊಂಡು ಅಸುರಕ್ಷಿತವಾಗಿ ಸೆಲ್ಫಿ, ಫೋಟೊ ಮತ್ತು ವಿಡಿಯೊ ತೆಗೆದುಕೊಳ್ಳುತ್ತಿದ್ದರಿಂದ ಪೊಲೀಸರಿಗೆ ಮತ್ತು ಜಲಾಶಯದ ರಕ್ಷಣಾ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು.</p>.<p>ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಗುಂಪುಗೂಡುತ್ತಿದ್ದರಿಂದ ಪ್ರವಾಸಿಗರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಗಿತ್ತು. ಜಲಾಶಯದ ಹಿನ್ನೀರು ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರು ಮತ್ತು ಅಲ್ಲಿನ ರಕ್ಷಣಾ ಸಿಬ್ಬಂದಿ ನಡುವೆ ವಾಗ್ವಾದವೂ ನಡೆದಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ ಆ. 2 ರಿಂದ ಆ.17 ರ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.</p>.<p>ತುಂಗಭದ್ರಾ ಜಲಾಶಯ ಹಾಗೂ ಪ್ರೇಕ್ಷಣಿಯ ಸ್ಥಳಗಳ 2 ಕಿ.ಮೀ. ವ್ಯಾಪ್ತಿಯಲ್ಲಿ, ಕೊಪ್ಪಳ ಗ್ರಾಮೀಣ ಠಾಣೆ ಮತ್ತು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿನ್ನೀರು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯ ಪ್ರವೇಶಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.</p>.<p>ವಾರಾಂತ್ಯದಲ್ಲಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯ ವೀಕ್ಷಕರು ಬರುತ್ತಿದ್ದರು. ಹಾಗೆ ಬಂದ ಪ್ರವಾಸಿಗರು ದಡಕ್ಕೆ ಅಪ್ಪಳಿಸುವ ತೆರೆಗಳಿಗೆ ಮೈಯೊಡ್ಡಿ ನಿಲ್ಲುವುದು, ನೀರಲ್ಲಿ ನಿಂತುಕೊಂಡು ಅಸುರಕ್ಷಿತವಾಗಿ ಸೆಲ್ಫಿ, ಫೋಟೊ ಮತ್ತು ವಿಡಿಯೊ ತೆಗೆದುಕೊಳ್ಳುತ್ತಿದ್ದರಿಂದ ಪೊಲೀಸರಿಗೆ ಮತ್ತು ಜಲಾಶಯದ ರಕ್ಷಣಾ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು.</p>.<p>ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಗುಂಪುಗೂಡುತ್ತಿದ್ದರಿಂದ ಪ್ರವಾಸಿಗರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಗಿತ್ತು. ಜಲಾಶಯದ ಹಿನ್ನೀರು ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರು ಮತ್ತು ಅಲ್ಲಿನ ರಕ್ಷಣಾ ಸಿಬ್ಬಂದಿ ನಡುವೆ ವಾಗ್ವಾದವೂ ನಡೆದಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ ಆ. 2 ರಿಂದ ಆ.17 ರ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.</p>.<p>ತುಂಗಭದ್ರಾ ಜಲಾಶಯ ಹಾಗೂ ಪ್ರೇಕ್ಷಣಿಯ ಸ್ಥಳಗಳ 2 ಕಿ.ಮೀ. ವ್ಯಾಪ್ತಿಯಲ್ಲಿ, ಕೊಪ್ಪಳ ಗ್ರಾಮೀಣ ಠಾಣೆ ಮತ್ತು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿನ್ನೀರು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>