ಇದೀಗ ಜ.14 ಮತ್ತು 15 ರಂದು ಸಂಕ್ರಮಣ ಹಬ್ಬ ಬಂದಿದ್ದು, ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಈಗಾಗಲೇ ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅಂಜನಾದ್ರಿ ದೇವಸ್ಥಾನಕ್ಕೆ ಬೇರೆ ಜಿಲ್ಲೆಗಳಿಂದಲೂ ಸಹ ಭಕ್ತರು ಬರುತ್ತಾರೆ. ಆದ್ದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ 3ದಿನ ದೇವರ ದರ್ಶನಕ್ಕೆ ಭಕ್ತರನ್ನು ನಿಷೇಧಿಸಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.