ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸವಿರಾಜ್ ಆನಂದ್ (ವಿಭಾ ಸಾಹಿತ್ಯ ಪ್ರಶಸ್ತಿ), ಧಾರವಾಡದ ಎಸ್.ಆರ್. ಹಿರೇಮಠ (ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ), ಉತ್ತರ ಕನ್ನಡ ಜಿಲ್ಲೆಯ ಕೆರೆಕೋಣದ ಮಾಧವಿ ಭಂಡಾರಿ (ನವಲಕಲ್ ಬ್ರಹ್ಮನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ ಗೌರವ), ಬೆಳಗಾವಿಯ ಶಿವಾಜಿ ಕಾಗಣೇಕರ್ (ನಿಂಗಪ್ಪ ಸಂಶಿ ರೈತಚೇತನ ಪ್ರಶಸ್ತಿ), ಮೈಸೂರಿನ ಜನಾರ್ದನ ಜನ್ನಿ (ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿ), ಬೆಂಗಳೂರಿನ ಇಂದೂಧರ ಹೊನ್ನಾಪುರ (ಚಂದ್ರಶೇಖರ ಹೊಸಮನಿ ಅಂಬೇಡ್ಕರ್ ಪತ್ರಿಕಾ ಮಾರ್ಗಿ ಪ್ರಶಸ್ತಿ) ಮತ್ತು ಕೊಪ್ಪಳ ತಾಲ್ಲೂಕಿನ ಕುಣಿಕೇರಿಯ ಹುಚ್ಚಮ್ಮ ಚೌಧರಿ (ಸಮಾಜಮುಖಿ ಮಹಿಳೆ) ಅವರಿಗೆ 26ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.