ಸಾಣಾಪುರ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯಾಗುವ ನಿಟ್ಟಿನಲ್ಲಿ ಶ್ರಮಿಸಿದ ತನಿಖಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್. ಎಸ್.ತಂಗಡಗಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಭಿನಂದಿಸಿದರು. ಸಂಸದ ರಾಜಶೇಖರ ಹಿಟ್ನಾಳ ಎಸ್.ಪಿ. ಡಾ. ರಾಮ್ ಎಲ್. ಅರಸಿದ್ಧಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಇದ್ದರು