<p>ಪ್ರಜಾವಾಣಿ ವಾರ್ತೆ</p>.<p><strong>ಕುಕನೂರು:</strong> ‘ಬ್ರಿಟಿಷರನ್ನು ನಡುಗಿಸಿದ ದೇಶಪ್ರೇಮಿ ವೀರ ಸಂಗೊಳ್ಳಿ ರಾಯಣ್ಣ ದೇಶಕ್ಕೆ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಮೊಟ್ಟ ಮೊದಲಿಗರು’ ಎಂದು ಪ್ರಾಚಾರ್ಯ ಈಶಪ್ಪ ಮಳಗಿ ಹೇಳಿದರು.</p>.<p>ಪಟ್ಟಣದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾಲುಮತ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ರೈತರ ಪರವಾಗಿ ತೆರಿಗೆ ವಿರುದ್ಧ ದಂಗೆ ಮಾಡಿದ ಮಹಾನ್ ಚೇತನ್ ಸಂಗೊಳ್ಳಿ ರಾಯಣ್ಣ ಅವರು ಗೆರಿಲ್ಲಾ ಯುದ್ಧದ ಮಾದರಿಯಲ್ಲಿ ದಂಗೆ ಮಾಡಿ ಬ್ರಿಟಿಷರನ್ನು ನಿದ್ದೆಗೆಡಿಸಿದರು’ ಎಂದರು.</p>.<p>ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಮೆರವಣಿಗೆಯು ರಾಯಣ್ಣನ ವೃತ್ತದಿಂದ ಅಂಬೇಡ್ಕರ್ ವೃತ್ತ ಹಾಗೂ ನಗರದ ಪ್ರಮುಖ ರಾಜಬೀದಿಗಳಲ್ಲಿ ನೂರಾರು ಮಹಿಳೆಯರ ಕುಂಭ, ಕಳಸದೊಂದಿಗೆ ವೈಭವದಿಂದ ನೆರವೇರಿತು.</p>.<p>ವಿರೂಪಾಕ್ಷಯ್ಯ ಗುರುವಿನ, ಮಂಜುನಾಥಯ್ಯ ಗುರುವಿನ, ಸಮಾಜದ ತಾಲ್ಲೂಕ ಅಧ್ಯಕ್ಷ ಮಂಜುನಾಥ್ ಕಡಮನಿ, ಶೇಖಪ್ಪ ಕಂಬಳಿ, ಶರಣಪ್ಪ ಕೊಪ್ಪದ್, ಮಲ್ಲಪ್ಪ ಚಳಮಾರದ, ದೇವಪ್ಪ ಸೋಬಾನಾದ್, ಶ್ರೀನಿವಾಸ್ ನಿಂಗಾಪುರ, ವೀರಪ್ಪ ಚಾಕ್ರಿ, ಸಂಗಪ್ಪ ಕಿಂದ್ರಿ, ಸಂಗಪ್ಪ ಕೊಪ್ಪದ್, ಬಸವರಾಜ ಅಡವಿ, ಮಹೇಶ್ ಕವಲೂರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಕುಕನೂರು:</strong> ‘ಬ್ರಿಟಿಷರನ್ನು ನಡುಗಿಸಿದ ದೇಶಪ್ರೇಮಿ ವೀರ ಸಂಗೊಳ್ಳಿ ರಾಯಣ್ಣ ದೇಶಕ್ಕೆ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಮೊಟ್ಟ ಮೊದಲಿಗರು’ ಎಂದು ಪ್ರಾಚಾರ್ಯ ಈಶಪ್ಪ ಮಳಗಿ ಹೇಳಿದರು.</p>.<p>ಪಟ್ಟಣದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾಲುಮತ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ರೈತರ ಪರವಾಗಿ ತೆರಿಗೆ ವಿರುದ್ಧ ದಂಗೆ ಮಾಡಿದ ಮಹಾನ್ ಚೇತನ್ ಸಂಗೊಳ್ಳಿ ರಾಯಣ್ಣ ಅವರು ಗೆರಿಲ್ಲಾ ಯುದ್ಧದ ಮಾದರಿಯಲ್ಲಿ ದಂಗೆ ಮಾಡಿ ಬ್ರಿಟಿಷರನ್ನು ನಿದ್ದೆಗೆಡಿಸಿದರು’ ಎಂದರು.</p>.<p>ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಮೆರವಣಿಗೆಯು ರಾಯಣ್ಣನ ವೃತ್ತದಿಂದ ಅಂಬೇಡ್ಕರ್ ವೃತ್ತ ಹಾಗೂ ನಗರದ ಪ್ರಮುಖ ರಾಜಬೀದಿಗಳಲ್ಲಿ ನೂರಾರು ಮಹಿಳೆಯರ ಕುಂಭ, ಕಳಸದೊಂದಿಗೆ ವೈಭವದಿಂದ ನೆರವೇರಿತು.</p>.<p>ವಿರೂಪಾಕ್ಷಯ್ಯ ಗುರುವಿನ, ಮಂಜುನಾಥಯ್ಯ ಗುರುವಿನ, ಸಮಾಜದ ತಾಲ್ಲೂಕ ಅಧ್ಯಕ್ಷ ಮಂಜುನಾಥ್ ಕಡಮನಿ, ಶೇಖಪ್ಪ ಕಂಬಳಿ, ಶರಣಪ್ಪ ಕೊಪ್ಪದ್, ಮಲ್ಲಪ್ಪ ಚಳಮಾರದ, ದೇವಪ್ಪ ಸೋಬಾನಾದ್, ಶ್ರೀನಿವಾಸ್ ನಿಂಗಾಪುರ, ವೀರಪ್ಪ ಚಾಕ್ರಿ, ಸಂಗಪ್ಪ ಕಿಂದ್ರಿ, ಸಂಗಪ್ಪ ಕೊಪ್ಪದ್, ಬಸವರಾಜ ಅಡವಿ, ಮಹೇಶ್ ಕವಲೂರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>