ಈಶ್ವರ ಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾತ್ರೆಯ ನೇತೃತ್ವ ವಹಿಸಿದ್ದ ಶ್ರೀಪಾದ ಭಟ್ಟ, ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರ, ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಡಿ ಎಚ್.ಪೂಜಾರ, ಎಐಟಿಯುಸಿಐ ಜಿಲ್ಲಾಧ್ಯಕ್ಷ ಬಸವರಾಜ ಶೀಲವಂತರ ಮಾತನಾಡಿ ‘ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಜನ ಮತದಾನದ ಮೂಲಕ ತೀರ್ಪು ನೀಡುವ ಮೊದಲು ತಾವೇ ತೀರ್ಪು ನೀಡುವುದು ಸರ್ವಾಧಿಕಾರದ ಧೋರಣೆ’ ಎಂದರು.