85 ವರ್ಷದ ಸಣ್ಣರಂಗಪ್ಪ ಅವರು ಬದುಕಿನುದ್ದಕ್ಕೂ ಕಲೆಯನ್ನೇ ಜೀವ ಮತ್ತು ಅದರ ಸೊಬಗನ್ನೇ ಜೀವಾಳವಾಗಿರಿಸಿಕೊಂಡ ಕಲಾವಿದರು. 2022ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. ತಮ್ಮ 10ನೇ ವಯಸ್ಸಿನಿಂದ ಕಿನ್ನಾಳ ಕಲೆ ಪ್ರಚುರಪಡಿಸುತ್ತ ಬಂದಿರುವ ಸಣ್ಣರಂಗಪ್ಪ ಧಾರವಾಡ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳನ್ನು ಸುತ್ತಾಡಿ ಗ್ರಾಮದೇವತೆಗಳು, ಛತ್ರಿ, ಚಾಮರ, ದಶಮಿದಿಂಡು, ಬಾರಕೋಲಗುಣಿ ಮತ್ತು ಮಕ್ಕಳ ಆಟಿಕೆ ಬೊಂಬೆಗಳನ್ನು ಮಾಡಿದ್ದಾರೆ. ಹೊರ ರಾಜ್ಯಗಳಲ್ಲಿಯೂ ಕಿನ್ನಾಳ ಕಲೆಯ ಛಾಪು ಮೂಡಿಸಿದ್ದಾರೆ.