<p><strong>ಗಂಗಾವತಿ:</strong> ನಗರದ ವಿರುಪಾಪುರ ತಾಂಡಾದಲ್ಲಿ ಬಂಜಾರ ಸಮಾಜದಿಂದ ಸೋಮವಾರ ಸಂತ ಸೇವಾಲಾಲರ 282ನೇ ಜಯಂತಿ ಆಚರಿಸಲಾಯಿತು.</p>.<p>ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಶಾಸಕ ಪರಣ್ಣ ಮುನವಳ್ಳಿ ಪುಷ್ಪಾರ್ಚನೆ ಮಾಡಿದರು.</p>.<p>ಬಳಿಕ ಮಾತನಾಡಿ,‘ಸೇವಾಲಾಲರ ಆದರ್ಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ನಿರಂತರವಾಗಿ ಅವರನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು’ ಎಂದರು.</p>.<p>ಬಿಜೆಪಿ ಯುವ ಮುಖಂಡ ಜಿ.ಶ್ರೀಧರ್, ಗೋರ ಸೇನಾ ರಾಜ್ಯ ಘಟಕದ ಉಪಾಧ್ಯಕ್ಷ ಶಿವಪ್ಪ ಜಾಗಗೋರ್, ಶಂಕರ್ ನಾಯ್ಕ್, ಸುಳೇಕಲ್ ವೀರೇಶ, ಹನಮಂತ ಜಾಧವ, ಪಾಂಡು ನಾಯ್ಕ್, ಲೋಕೇಶ, ರವಿಚಂದ್ರ, ಕೃಷ್ಣ ನಾಯ್ಕ್, ಸಂತೋಷ, ಶಶಿಕುಮಾರ್ ಹಾಗೂ ಮಂಜುನಾಥ ಇದ್ದರು.</p>.<p><strong>ತಾಲ್ಲೂಕು ಆಡಳಿತದಿಂದ ಆಚರಣೆ:</strong> ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಂತ ಸೇವಾಲಾಲ್ ಜಯಂತಿ ಆಚರಿಸಲಾಯಿತು.</p>.<p>ಶಿರಸ್ತೇದಾರ್ ವಿ.ಎಚ್.ಹೊರಪೇಟೆ ಮಾತನಾಡಿ,‘ಸಂತರು, ಶರಣರು ನಡೆದಾಡಿದ ಭಾರತ ದೇಶ ಸಂಸ್ಕಾರದ ಕಾರಣಕ್ಕೆ ಜಗತ್ತಿಗೆ ಹೆಸರು ವಾಸಿವಾಗಿದೆ. ಅಂಥ ಮಹಾನ್ ವ್ಯಕ್ತಿಗಳ ಜಯಂತಿಯನ್ನು ನಾವುಗಳು ಕೇವಲ ಆಚರಣೆಗೆ ಮಾತ್ರ ಸಿಮೀತ ಮಾಡಬಾರದು’ ಎಂದು ಹೇಳಿದರು.</p>.<p>ಸಂತ ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ನಗರದ ವಿರುಪಾಪುರ ತಾಂಡಾದಲ್ಲಿ ಬಂಜಾರ ಸಮಾಜದಿಂದ ಸೋಮವಾರ ಸಂತ ಸೇವಾಲಾಲರ 282ನೇ ಜಯಂತಿ ಆಚರಿಸಲಾಯಿತು.</p>.<p>ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಶಾಸಕ ಪರಣ್ಣ ಮುನವಳ್ಳಿ ಪುಷ್ಪಾರ್ಚನೆ ಮಾಡಿದರು.</p>.<p>ಬಳಿಕ ಮಾತನಾಡಿ,‘ಸೇವಾಲಾಲರ ಆದರ್ಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ನಿರಂತರವಾಗಿ ಅವರನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು’ ಎಂದರು.</p>.<p>ಬಿಜೆಪಿ ಯುವ ಮುಖಂಡ ಜಿ.ಶ್ರೀಧರ್, ಗೋರ ಸೇನಾ ರಾಜ್ಯ ಘಟಕದ ಉಪಾಧ್ಯಕ್ಷ ಶಿವಪ್ಪ ಜಾಗಗೋರ್, ಶಂಕರ್ ನಾಯ್ಕ್, ಸುಳೇಕಲ್ ವೀರೇಶ, ಹನಮಂತ ಜಾಧವ, ಪಾಂಡು ನಾಯ್ಕ್, ಲೋಕೇಶ, ರವಿಚಂದ್ರ, ಕೃಷ್ಣ ನಾಯ್ಕ್, ಸಂತೋಷ, ಶಶಿಕುಮಾರ್ ಹಾಗೂ ಮಂಜುನಾಥ ಇದ್ದರು.</p>.<p><strong>ತಾಲ್ಲೂಕು ಆಡಳಿತದಿಂದ ಆಚರಣೆ:</strong> ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಂತ ಸೇವಾಲಾಲ್ ಜಯಂತಿ ಆಚರಿಸಲಾಯಿತು.</p>.<p>ಶಿರಸ್ತೇದಾರ್ ವಿ.ಎಚ್.ಹೊರಪೇಟೆ ಮಾತನಾಡಿ,‘ಸಂತರು, ಶರಣರು ನಡೆದಾಡಿದ ಭಾರತ ದೇಶ ಸಂಸ್ಕಾರದ ಕಾರಣಕ್ಕೆ ಜಗತ್ತಿಗೆ ಹೆಸರು ವಾಸಿವಾಗಿದೆ. ಅಂಥ ಮಹಾನ್ ವ್ಯಕ್ತಿಗಳ ಜಯಂತಿಯನ್ನು ನಾವುಗಳು ಕೇವಲ ಆಚರಣೆಗೆ ಮಾತ್ರ ಸಿಮೀತ ಮಾಡಬಾರದು’ ಎಂದು ಹೇಳಿದರು.</p>.<p>ಸಂತ ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>