<p>ಕೊಪ್ಪಳ: ‘ಯಕ್ಷಗಾನ ಪ್ರಾಚೀನ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಉಳಿಸಿ, ಬೆಳಸಿಕೊಂಡು ಹೋಗಬೇಕು’ ಎಂದು ಕಾಂಗ್ರೆಸ್ ಮುಖಂಡ ಸಂಗಣ್ಣ ಕರಡಿ ಹೇಳಿದರು. </p>.<p>ನಗರ ಸಾಹಿತ್ಯ ಭವನದಲ್ಲಿ ಕರಾವಳಿ ಬಳಗ ಕೊಪ್ಪಳ, ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ವತಿಯಿಂದ ನಡೆದ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ‘ಯಕ್ಷಗಾನ ಕಲೆಯು ಕನ್ನಡ ಭಾಷೆಯನ್ನು ಗಟ್ಟಿಗೊಳಿಸುತ್ತದೆ, ಈ ಕಲೆಯು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕಲೆ’ ಎಂದರು.</p>.<p>ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ ‘ಯಕ್ಷಗಾನಕ್ಕೆ ಇರುವ ಶಕ್ತಿ ಎಂಥದ್ದು ಎನ್ನುವುದನ್ನು ಮೆಲುಕು ಹಾಕಬೇಕಾಗಿದೆ. ಈ ಕಲೆ ದೇಶ, ವಿದೇಶಗಳಲ್ಲಿ ಖ್ಯಾತಿ ಪಡೆದಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಕಣವಿ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಶಿಕರ ಶೆಟ್ಟಿ, ಕರಾವಳಿ ಬಳಗದ ಗೌರವ ಅಧ್ಯಕ್ಷ ಜೀವನ ಶೆಟ್ಟಿ, ಸಿದ್ಧಿವಿನಾಯಕ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಸಂಚಾಲಕ ರಂಜಿತ ಶೆಟ್ಟಿ ವಕ್ವಾಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ‘ಯಕ್ಷಗಾನ ಪ್ರಾಚೀನ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಉಳಿಸಿ, ಬೆಳಸಿಕೊಂಡು ಹೋಗಬೇಕು’ ಎಂದು ಕಾಂಗ್ರೆಸ್ ಮುಖಂಡ ಸಂಗಣ್ಣ ಕರಡಿ ಹೇಳಿದರು. </p>.<p>ನಗರ ಸಾಹಿತ್ಯ ಭವನದಲ್ಲಿ ಕರಾವಳಿ ಬಳಗ ಕೊಪ್ಪಳ, ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ವತಿಯಿಂದ ನಡೆದ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ‘ಯಕ್ಷಗಾನ ಕಲೆಯು ಕನ್ನಡ ಭಾಷೆಯನ್ನು ಗಟ್ಟಿಗೊಳಿಸುತ್ತದೆ, ಈ ಕಲೆಯು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕಲೆ’ ಎಂದರು.</p>.<p>ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ ‘ಯಕ್ಷಗಾನಕ್ಕೆ ಇರುವ ಶಕ್ತಿ ಎಂಥದ್ದು ಎನ್ನುವುದನ್ನು ಮೆಲುಕು ಹಾಕಬೇಕಾಗಿದೆ. ಈ ಕಲೆ ದೇಶ, ವಿದೇಶಗಳಲ್ಲಿ ಖ್ಯಾತಿ ಪಡೆದಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಕಣವಿ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಶಿಕರ ಶೆಟ್ಟಿ, ಕರಾವಳಿ ಬಳಗದ ಗೌರವ ಅಧ್ಯಕ್ಷ ಜೀವನ ಶೆಟ್ಟಿ, ಸಿದ್ಧಿವಿನಾಯಕ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಸಂಚಾಲಕ ರಂಜಿತ ಶೆಟ್ಟಿ ವಕ್ವಾಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>