‘ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಈಗ ಚೆಕ್ ಡ್ಯಾಂ ನಿರ್ಮಿಸಲಾಗಿದೆ. ಅದಕ್ಕೆ ಅಳವಂಡಿ-ಭೈರಾಪುರದ ಕಾಲ್ನಡಿಗೆ ದಾರಿಯ ಹಳ್ಳದಲ್ಲಿ ಅಂತ್ಯಕ್ರಿಯೆ ಮಾಡಬೇಕಿದೆ. ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ, ಸ್ಮಶಾನಕ್ಕೆ ಜಾಗ ನೀಡುವಂತೆ ಒತ್ತಾಯಿಸಿದರೂ ಜಿಲ್ಲಾಡಳಿತ ಸ್ಪಂದಿಸಲಿಲ್ಲ. ದಾರಿ ಮಧ್ಯದ ಜಮೀನಿನ ಮಾಲೀಕರು ಅಂತ್ಯಕ್ರಿಯೆಗೆ ಅಡ್ಡಿಪಡಿಸಿದರೆ, ಮತ್ತಷ್ಟು ದೂರ ಹೋಗಬೇಕು’ ಎಂದು ನಿವಾಸಿಗಳು ನೋವು ತೋಡಿಕೊಂಡರು.