ಶುಕ್ರವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳವರೆಗೂ ಶಾಲೆ ತೆರೆಯುವುದು ಬೇಡ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು, ಬೆಳಿಗ್ಗೆ ಒಂದು ಸಂಜೆಗೆ ಮತ್ತೊಂದು ಹೇಳಿಕೆ ಬದಲಿಸುತ್ತ ಹೋಗುತ್ತಾರೆ. ಅದೇ ರೀತಿ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ಹೇಳಿಕೆಗಳು ತದ್ವಿರುದ್ಧವಾಗಿರುತ್ತವೆ. ಶಾಲೆ ತೆರೆಯುವ ವಿಚಾರದಲ್ಲಿ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ವಿರೋಧ ಪಕ್ಷದವರು ಸಲಹೆ ನೀಡಲಿ ನಂತರ ಎಲ್ಲರೂ ಒಟ್ಟಿಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.