<p><strong>ಅಳವಂಡಿ</strong> (ಕೊಪ್ಪಳ): ಕೊಪ್ಪಳ ತಾಲ್ಲೂಕಿನ ಅಳವಂಡಿ ಸಮೀಪದ ತಿಗರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವೆಂಕಟೇಶ ಕವಲೂರು ಅವರು ಶಾಲೆಗೆ ನೀರಿನ ವ್ಯವಸ್ಥೆ ಕಲ್ಪಿಸಲು ತಮ್ಮ ಸ್ವಂತ ಖರ್ಚಿನಲ್ಲಿ ಬೋರ್ವೆಲ್ ಕೊರೆಸಿ ನೀರಿನ ದಾಹ ನೀಗಿಸಿದ್ದಾರೆ.</p>.<p>ಶಾಲಾ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೈಪ್ಲೈನ್ ಅಳವಡಿಸಲಾಗಿತ್ತು. ಕೆಲವೊಮ್ಮೆ ನೀರಿನ ಸಮಸ್ಯೆ ಕೂಡ ಕಾಡುತ್ತಿತ್ತು. ಇದನ್ನು ಮನಗಂಡ ಅವರು ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಮಕ್ಕಳಿಗೆ ಕುಡಿಯಲು ನೀರು, ಬಿಸಿಯೂಟ ತಯಾರಿಕೆಗೆ, ಕೈತೋಟ ನಿರ್ಮಿಸಲು ಸಹಕಾರಿಯಾಗುತ್ತದೆ ಎನ್ನುತ್ತಾರೆ ಶಿಕ್ಷಕರು.</p>.<p>‘ಎಸ್ಡಿಎಂಸಿ ಅಧ್ಯಕ್ಷ ಆದ ನಂತರ ಶಾಲೆಗೆ ಏನಾದರೂ ದೇಣಿಗೆ ನೀಡಬೇಕು ಎಂಬ ಹಂಬಲ ಇತ್ತು. ಶಾಲೆಗೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ₹40 ಸಾವಿರ ರೂಪಾಯಿ ಖರ್ಚು ಮಾಡಿ ಬೋರ್ವೆಲ್ ಹಾಕಿಸಿದ್ದೇನೆ’ ಎಂದು ವೆಂಕಟೇಶ ಕವಲೂರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ</strong> (ಕೊಪ್ಪಳ): ಕೊಪ್ಪಳ ತಾಲ್ಲೂಕಿನ ಅಳವಂಡಿ ಸಮೀಪದ ತಿಗರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವೆಂಕಟೇಶ ಕವಲೂರು ಅವರು ಶಾಲೆಗೆ ನೀರಿನ ವ್ಯವಸ್ಥೆ ಕಲ್ಪಿಸಲು ತಮ್ಮ ಸ್ವಂತ ಖರ್ಚಿನಲ್ಲಿ ಬೋರ್ವೆಲ್ ಕೊರೆಸಿ ನೀರಿನ ದಾಹ ನೀಗಿಸಿದ್ದಾರೆ.</p>.<p>ಶಾಲಾ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೈಪ್ಲೈನ್ ಅಳವಡಿಸಲಾಗಿತ್ತು. ಕೆಲವೊಮ್ಮೆ ನೀರಿನ ಸಮಸ್ಯೆ ಕೂಡ ಕಾಡುತ್ತಿತ್ತು. ಇದನ್ನು ಮನಗಂಡ ಅವರು ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಮಕ್ಕಳಿಗೆ ಕುಡಿಯಲು ನೀರು, ಬಿಸಿಯೂಟ ತಯಾರಿಕೆಗೆ, ಕೈತೋಟ ನಿರ್ಮಿಸಲು ಸಹಕಾರಿಯಾಗುತ್ತದೆ ಎನ್ನುತ್ತಾರೆ ಶಿಕ್ಷಕರು.</p>.<p>‘ಎಸ್ಡಿಎಂಸಿ ಅಧ್ಯಕ್ಷ ಆದ ನಂತರ ಶಾಲೆಗೆ ಏನಾದರೂ ದೇಣಿಗೆ ನೀಡಬೇಕು ಎಂಬ ಹಂಬಲ ಇತ್ತು. ಶಾಲೆಗೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ₹40 ಸಾವಿರ ರೂಪಾಯಿ ಖರ್ಚು ಮಾಡಿ ಬೋರ್ವೆಲ್ ಹಾಕಿಸಿದ್ದೇನೆ’ ಎಂದು ವೆಂಕಟೇಶ ಕವಲೂರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>