<p><strong>ಗಂಗಾವತಿ: </strong>‘ಪಶುಸಂಗೋಪನೆ ದೇಶದ ಸಂಪತ್ತು. ಇದರಿಂದ ಸಾವಯವ ಕೃಷಿಗೂ ಅನುಕೂಲವಾಗುತ್ತದೆ. ಆದ್ದರಿಂದ ವೈಜ್ಞಾನಿಕ ನಿರ್ವಹಣೆ ಅಗತ್ಯ’ ಎಂದು ಉಪನಿರ್ದೇಶಕ ಡಾ.ನಾಗರಾಜ ಎಚ್ ಹೇಳಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೋಳಿ ಶೀತ ಜ್ವರ, ಹುಚ್ಚು ನಾಯಿ ರೋಗ ಹಾಗೂ ಪ್ರಾಣಿಜನ್ಯ ರೋಗಗಳ ನಿಯಂತ್ರಣದ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಂ.ವಿ.ರವಿ ಮಾತನಾಡಿ,‘ಇಲಾಖೆ ಸಿಬ್ಬಂದಿಗೆ ನಿಯತಕಾಲಿಕವಾಗಿ ತಾಂತ್ರಿಕ ಕಾರ್ಯಾಗಾರಗಳನ್ನು ನಡೆಸಿಕೊಟ್ಟು ಅವರ ತಾಂತ್ರಿಕ ಜ್ಞಾನವನ್ನು ಪುನಶ್ಚೇತನಗೊಳಿಸಬೇಕು’ ಎಂದು ತಿಳಿಸಿದರು.</p>.<p>ಕೋಳಿ ಶೀತ ಜ್ವರ, ಹುಚ್ಚು ನಾಯಿ ರೋಗ (ರೇಬೀಸ್) ಹಾಗೂ ಪ್ರಾಣಿಜನ್ಯ ರೋಗಗಳ ನಿಯಂತ್ರಣದ ಕುರಿತು ಉಪನ್ಯಾಸ ನೀಡಲಾಯಿತು.</p>.<p>ಸಹಾಯಕ ನಿರ್ದೇಶಕ ಡಾ.ಪ್ರಕಾಶ ಚೂರಿ, ಪಶು ವಿಜ್ಞಾನಿ ಡಾ.ಮಹಾಂತೇಶ ಎಂ.ಟಿ, ಎಂ.ಎಚ್.ವೆಂಕಟರಾಜು, ಎಸ್.ಎಚ್.ಘಂಟಿ, ಕಾರ್ಯದರ್ಶಿ ಕೆ.ಸಿ.ಸೋಮಶೇಖರ ಹಾಗೂ ಡಾ.ಆದರ್ಶ ನೂಲ್ವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>‘ಪಶುಸಂಗೋಪನೆ ದೇಶದ ಸಂಪತ್ತು. ಇದರಿಂದ ಸಾವಯವ ಕೃಷಿಗೂ ಅನುಕೂಲವಾಗುತ್ತದೆ. ಆದ್ದರಿಂದ ವೈಜ್ಞಾನಿಕ ನಿರ್ವಹಣೆ ಅಗತ್ಯ’ ಎಂದು ಉಪನಿರ್ದೇಶಕ ಡಾ.ನಾಗರಾಜ ಎಚ್ ಹೇಳಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೋಳಿ ಶೀತ ಜ್ವರ, ಹುಚ್ಚು ನಾಯಿ ರೋಗ ಹಾಗೂ ಪ್ರಾಣಿಜನ್ಯ ರೋಗಗಳ ನಿಯಂತ್ರಣದ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಂ.ವಿ.ರವಿ ಮಾತನಾಡಿ,‘ಇಲಾಖೆ ಸಿಬ್ಬಂದಿಗೆ ನಿಯತಕಾಲಿಕವಾಗಿ ತಾಂತ್ರಿಕ ಕಾರ್ಯಾಗಾರಗಳನ್ನು ನಡೆಸಿಕೊಟ್ಟು ಅವರ ತಾಂತ್ರಿಕ ಜ್ಞಾನವನ್ನು ಪುನಶ್ಚೇತನಗೊಳಿಸಬೇಕು’ ಎಂದು ತಿಳಿಸಿದರು.</p>.<p>ಕೋಳಿ ಶೀತ ಜ್ವರ, ಹುಚ್ಚು ನಾಯಿ ರೋಗ (ರೇಬೀಸ್) ಹಾಗೂ ಪ್ರಾಣಿಜನ್ಯ ರೋಗಗಳ ನಿಯಂತ್ರಣದ ಕುರಿತು ಉಪನ್ಯಾಸ ನೀಡಲಾಯಿತು.</p>.<p>ಸಹಾಯಕ ನಿರ್ದೇಶಕ ಡಾ.ಪ್ರಕಾಶ ಚೂರಿ, ಪಶು ವಿಜ್ಞಾನಿ ಡಾ.ಮಹಾಂತೇಶ ಎಂ.ಟಿ, ಎಂ.ಎಚ್.ವೆಂಕಟರಾಜು, ಎಸ್.ಎಚ್.ಘಂಟಿ, ಕಾರ್ಯದರ್ಶಿ ಕೆ.ಸಿ.ಸೋಮಶೇಖರ ಹಾಗೂ ಡಾ.ಆದರ್ಶ ನೂಲ್ವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>