<p>ಹನುಮಸಾಗರ: ‘ವಿದ್ಯಾರ್ಥಿಗಳು ಸಂಶೋಧನಾತ್ಮಕ ಗುಣ ಬೆಳೆಸಿಕೊಂಡರೆ ಕೈಗಾರಿಕಾ ಕ್ಷೇತ್ರದಲ್ಲಿ, ಉದ್ದಿಮೆಗಳಲ್ಲಿ ಉದ್ಯೋಗ ಪಡೆಯಬಹುದು ಅಥವಾ ಸ್ವಂತ ಉದ್ದಿಮೆದಾರರಾಗಬಹುದು’ ಎಂದು ಪ್ರಭಾರ ಪ್ರಾಚಾರ್ಯ ವಿ.ಎಮ್.ಕಾಳಗಿ ಹೇಳಿದರು.</p>.<p>ಸಮೀಪದ ಮನ್ನೇರಾಳ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಿರ್ಲೋಸ್ಕರ್ ಕಂಪನಿಯಿಂದ ಹಮ್ಮಿಕೊಳ್ಳಲಾಗಿದ್ದ ಎ.ಟಿ.ಎಸ್ ತರಬೇತಿಗಾಗಿ ಅಭ್ಯರ್ಥಿಗಳ ಆಯ್ಕೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಮೂಲಕ ಐ.ಟಿ.ಐ. ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಎ.ಟಿ.ಎಸ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಯಿತು.</p>.<p>ಸಂದರ್ಶನದಲ್ಲಿ 150ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.</p>.<p>ಕಿರ್ಲೋಸ್ಕರ್ ಕಂಪನಿಯ ಅಧಿಕಾರಿಗಳಾದ ಮೇಘರಾಜ, ಹರೀಶ ಹಾಗೂ ರವಿ ಅವರು ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡರು.</p>.<p>ಕಿರಿಯ ತರಬೇತಿ ಅಧಿಕಾರಿಗಳಾದ ರಾಠೋಡ ದಿಲೀಪ್ ಖೇಮು, ಅತಿಥಿ ಉಪನ್ಯಾಸಕರಾದ ಝಡ್.ಎಮ್.ಮುಲ್ಲಾ, ವಿಜಯಮಾಹಾಂತೇಶ ಹಾಗೂ ಕರೀಮಸಾಬ ಬಳೂಟಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನುಮಸಾಗರ: ‘ವಿದ್ಯಾರ್ಥಿಗಳು ಸಂಶೋಧನಾತ್ಮಕ ಗುಣ ಬೆಳೆಸಿಕೊಂಡರೆ ಕೈಗಾರಿಕಾ ಕ್ಷೇತ್ರದಲ್ಲಿ, ಉದ್ದಿಮೆಗಳಲ್ಲಿ ಉದ್ಯೋಗ ಪಡೆಯಬಹುದು ಅಥವಾ ಸ್ವಂತ ಉದ್ದಿಮೆದಾರರಾಗಬಹುದು’ ಎಂದು ಪ್ರಭಾರ ಪ್ರಾಚಾರ್ಯ ವಿ.ಎಮ್.ಕಾಳಗಿ ಹೇಳಿದರು.</p>.<p>ಸಮೀಪದ ಮನ್ನೇರಾಳ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಿರ್ಲೋಸ್ಕರ್ ಕಂಪನಿಯಿಂದ ಹಮ್ಮಿಕೊಳ್ಳಲಾಗಿದ್ದ ಎ.ಟಿ.ಎಸ್ ತರಬೇತಿಗಾಗಿ ಅಭ್ಯರ್ಥಿಗಳ ಆಯ್ಕೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಮೂಲಕ ಐ.ಟಿ.ಐ. ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಎ.ಟಿ.ಎಸ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಯಿತು.</p>.<p>ಸಂದರ್ಶನದಲ್ಲಿ 150ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.</p>.<p>ಕಿರ್ಲೋಸ್ಕರ್ ಕಂಪನಿಯ ಅಧಿಕಾರಿಗಳಾದ ಮೇಘರಾಜ, ಹರೀಶ ಹಾಗೂ ರವಿ ಅವರು ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡರು.</p>.<p>ಕಿರಿಯ ತರಬೇತಿ ಅಧಿಕಾರಿಗಳಾದ ರಾಠೋಡ ದಿಲೀಪ್ ಖೇಮು, ಅತಿಥಿ ಉಪನ್ಯಾಸಕರಾದ ಝಡ್.ಎಮ್.ಮುಲ್ಲಾ, ವಿಜಯಮಾಹಾಂತೇಶ ಹಾಗೂ ಕರೀಮಸಾಬ ಬಳೂಟಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>