<p><strong>ಹನುಮಸಾಗರ</strong>: ಗ್ರಾಮದಲ್ಲಿ ಸೋಮವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.</p>.<p>ಕಿತ್ತೂರರಾಣಿ ಚನ್ನಮ್ಮ ವೃತ್ತದ ಸಮೀಪದಲ್ಲಿರುವ ರಾಘವೇಂದ್ರ ಸ್ವೀಟ್ಸ್ ಅಂಗಡಿಯಲ್ಲಿ ₹10 ಸಾವಿರ ನಗದು ಹಾಗೂ ಗುಟಕಾ ಚೀಟ್ಗಳನ್ನು ಕಳವು ಮಾಡಲಾಗಿದೆ. ಇದೇ ಸಾಲಿನಲ್ಲಿರುವ ಶ್ರೀಲಕ್ಷ್ಮಿ ವೆಂಕಟೇಶ್ವರ ಮೆಡಿಕಲ್ ಸ್ಟೋರ್ನ ಬೀಗ ಮುರಿದು ಒಳನುಗ್ಗಿದ ಕಳ್ಳರು ₹30 ಸಾವಿರ ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಕಳವು ಮಾಡಿದ್ದಾರೆ.</p>.<p>ಕಳ್ಳತನದ ದೃಶ್ಯಗಳು ಅಂಗಡಿಗಳ ಹೊರಭಾಗದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಭಾಗಿಯಾಗಿರುವುದು ದೃಢಪಟ್ಟಿದೆ.</p>.<p>ಇದೇ ಅಂಗಡಿ ಪಕ್ಕದಲ್ಲಿರುವ ಬಟ್ಟೆ ಅಂಗಡಿಯ ಕಳ್ಳತನಕ್ಕೆ ಯತ್ನಿಸಲಾಗಿದೆ. ಅಂಗಡಿ ಮೇಲೆ ಮನೆ ಇರುವುದರಿಂದ ಶಬ್ದ ಕೇಳಿ ಮಾಲೀಕರು ಕೆಳಗೆ ಬರುವುದನ್ನು ಗಮನಿಸಿದ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.</p>.<p>ಘಟನೆ ಕುರಿತು ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಪೊಲೀಸ್ ಪಟ್ರೋಲಿಂಗ್ ಹೆಚ್ಚಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ</strong>: ಗ್ರಾಮದಲ್ಲಿ ಸೋಮವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.</p>.<p>ಕಿತ್ತೂರರಾಣಿ ಚನ್ನಮ್ಮ ವೃತ್ತದ ಸಮೀಪದಲ್ಲಿರುವ ರಾಘವೇಂದ್ರ ಸ್ವೀಟ್ಸ್ ಅಂಗಡಿಯಲ್ಲಿ ₹10 ಸಾವಿರ ನಗದು ಹಾಗೂ ಗುಟಕಾ ಚೀಟ್ಗಳನ್ನು ಕಳವು ಮಾಡಲಾಗಿದೆ. ಇದೇ ಸಾಲಿನಲ್ಲಿರುವ ಶ್ರೀಲಕ್ಷ್ಮಿ ವೆಂಕಟೇಶ್ವರ ಮೆಡಿಕಲ್ ಸ್ಟೋರ್ನ ಬೀಗ ಮುರಿದು ಒಳನುಗ್ಗಿದ ಕಳ್ಳರು ₹30 ಸಾವಿರ ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಕಳವು ಮಾಡಿದ್ದಾರೆ.</p>.<p>ಕಳ್ಳತನದ ದೃಶ್ಯಗಳು ಅಂಗಡಿಗಳ ಹೊರಭಾಗದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಭಾಗಿಯಾಗಿರುವುದು ದೃಢಪಟ್ಟಿದೆ.</p>.<p>ಇದೇ ಅಂಗಡಿ ಪಕ್ಕದಲ್ಲಿರುವ ಬಟ್ಟೆ ಅಂಗಡಿಯ ಕಳ್ಳತನಕ್ಕೆ ಯತ್ನಿಸಲಾಗಿದೆ. ಅಂಗಡಿ ಮೇಲೆ ಮನೆ ಇರುವುದರಿಂದ ಶಬ್ದ ಕೇಳಿ ಮಾಲೀಕರು ಕೆಳಗೆ ಬರುವುದನ್ನು ಗಮನಿಸಿದ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.</p>.<p>ಘಟನೆ ಕುರಿತು ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಪೊಲೀಸ್ ಪಟ್ರೋಲಿಂಗ್ ಹೆಚ್ಚಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>