ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಪೂರ್ವದಲ್ಲಿ ಗ್ರಾಮಸ್ಥರು, ರೈತರು ನೀರಿಗೆ ಮತ್ತು ದಾರಿಗೆ ಪ್ರತ್ಯೇಕ ಮಾರ್ಗ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿ, ಕಾಮಗಾರಿಯನ್ನೂ ಸ್ಥಗಿತಗೊಳಿಸಿದ್ದರು. ಆದರೆ ಜನರ ಮನವಿಗೆ ಸ್ಪಂದಿಸದ ರೈಲ್ವೆ ಇಲಾಖೆ ನಿರ್ಲಕ್ಷ್ಯ ವಹಿಸಿದ್ದರಿಂದ ಈಗ ಗ್ರಾಮಸ್ಥರು ಶಾಶ್ವತ ಸಮಸ್ಯೆಯ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರಾದ ಶೇಖರಗೌಡ, ಮಲ್ಲಪ್ಪ, ಷಣ್ಮುಖಪ್ಪ ಇತರರು ದೂರಿದರು.