<p><strong>ಯಲಬುರ್ಗಾ:</strong> ಉತ್ತಮ ಆರೋಗ್ಯಯುಕ್ತ ಪರಿಸರದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದಲೇ ಸ್ಥಾಪಿತವಾಗಿರುವ ವಸತಿ ಶಾಲೆಗಳಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯುವ ಮೂಲಕ ಅಲ್ಲಿನ ವಾತಾವರಣಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಎಸ್ಎಫ್ಐ ಮುಖಂಡರು ತಿಳಿಸಿದರು.</p>.<p>ಸಂಘಟನೆಯ ಪದಾಧಿಕಾರಿಗಳು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.</p>.<p>ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿದೆ. ಮಕ್ಕಳ ಅಭ್ಯಾಸಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಆರೈಕೆ ಕೇಂದ್ರಕ್ಕೆ ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಈ ಶಾಲೆಯಲ್ಲಿ ಕೇಂದ್ರವನ್ನು ತೆರೆಯಬಾರದು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ವಿವಿಧ ಕಾರಣಗಳಿಂದ ಮಕ್ಕಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಏರುಪೇರಾಗಿದೆ. ಕಾರಣ ಸರ್ಕಾರ ಬೇರೆ ಸ್ಥಳಗಳಲ್ಲಿ ಕೇಂದ್ರಗಳನ್ನು ತೆರೆದು ವಸತಿ ಶಾಲೆಗಳಲ್ಲಿ ಮಕ್ಕಳು ನೆಮ್ಮದಿಯಿಂದ ಉತ್ತಮ ಆರೋಗ್ಯಯುಕ್ತ ವಾತಾವರಣದಲ್ಲಿ ಅಭ್ಯಾಸಕ್ಕೆ ಅನುಕೂಲಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>.<p>ನೇತೃತ್ವ ವಹಿಸಿದ್ದ ಎಂ.ಸಿದ್ದಪ್ಪ ಅವರು ಕೂಡಲೇ ಈ ಆದೇಶವನ್ನು ರದ್ದುಪಡಿಸಿ ಬೇರೆ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ರಾಮಣ್ಣ ಹಿರೇಮನಿ, ಮಹಾಂತೇಶ ತೂಗುರಾಣಿ, ಕನಕಪ್ಪ, ಭೀಮಣ್ಣ, ಚಂದ್ರು, ಈರಪ್ಪ, ಶೇಖರಪ್ಪ ಗುರಾಣಿ, ಯಲ್ಲಪ್ಪ, ಮಲ್ಲೇಶಪ್ಪ, ವಿರೇಶ, ಸುರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ಉತ್ತಮ ಆರೋಗ್ಯಯುಕ್ತ ಪರಿಸರದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದಲೇ ಸ್ಥಾಪಿತವಾಗಿರುವ ವಸತಿ ಶಾಲೆಗಳಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯುವ ಮೂಲಕ ಅಲ್ಲಿನ ವಾತಾವರಣಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಎಸ್ಎಫ್ಐ ಮುಖಂಡರು ತಿಳಿಸಿದರು.</p>.<p>ಸಂಘಟನೆಯ ಪದಾಧಿಕಾರಿಗಳು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.</p>.<p>ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿದೆ. ಮಕ್ಕಳ ಅಭ್ಯಾಸಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಆರೈಕೆ ಕೇಂದ್ರಕ್ಕೆ ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಈ ಶಾಲೆಯಲ್ಲಿ ಕೇಂದ್ರವನ್ನು ತೆರೆಯಬಾರದು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ವಿವಿಧ ಕಾರಣಗಳಿಂದ ಮಕ್ಕಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಏರುಪೇರಾಗಿದೆ. ಕಾರಣ ಸರ್ಕಾರ ಬೇರೆ ಸ್ಥಳಗಳಲ್ಲಿ ಕೇಂದ್ರಗಳನ್ನು ತೆರೆದು ವಸತಿ ಶಾಲೆಗಳಲ್ಲಿ ಮಕ್ಕಳು ನೆಮ್ಮದಿಯಿಂದ ಉತ್ತಮ ಆರೋಗ್ಯಯುಕ್ತ ವಾತಾವರಣದಲ್ಲಿ ಅಭ್ಯಾಸಕ್ಕೆ ಅನುಕೂಲಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>.<p>ನೇತೃತ್ವ ವಹಿಸಿದ್ದ ಎಂ.ಸಿದ್ದಪ್ಪ ಅವರು ಕೂಡಲೇ ಈ ಆದೇಶವನ್ನು ರದ್ದುಪಡಿಸಿ ಬೇರೆ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ರಾಮಣ್ಣ ಹಿರೇಮನಿ, ಮಹಾಂತೇಶ ತೂಗುರಾಣಿ, ಕನಕಪ್ಪ, ಭೀಮಣ್ಣ, ಚಂದ್ರು, ಈರಪ್ಪ, ಶೇಖರಪ್ಪ ಗುರಾಣಿ, ಯಲ್ಲಪ್ಪ, ಮಲ್ಲೇಶಪ್ಪ, ವಿರೇಶ, ಸುರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>