<p><strong>ಕನಕಗಿರಿ:</strong> ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸೇರಿದಂತೆ ವಿವಿಧ ತಾಲ್ಲೂಕು ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಕಾರ್ಯಕರ್ತರು ಇಲ್ಲಿನ ತಹಶೀಲ್ದಾರ್ ಕಚೇರಿ ಮುಂದೆ ಗುರುವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.</p>.<p>ತಾಲ್ಲೂಕು ಕೇಂದ್ರವಾಗಿ 8 ವರ್ಷ ಉರುಳಿದರೂ ಬಿಇಒ ಸೇರಿದಂತೆ ವಿದ್ಯಾರ್ಥಿಗಳಿಗೆ, ಜನರಿಗೆ ಉಪಯೋಗವಾಗುವ ಕಚೇರಿಗಳು ಆರಂಭಗೊಂಡಿಲ್ಲ. ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಎಸ್ಎಫ್ಐ ಕೇಂದ್ರ ಸಮಿತಿ ಸದಸ್ಯ ದೊಡ್ಡಬಸವರಾಜ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ ಈಚನಾಳ ತಿಳಿಸಿದರು.</p>.<p>ಬಸ್ ಘಟಕ ಮಂಜೂರು ಮಾಡದ ಹಿನ್ನಲೆಯಲ್ಲಿ ಗ್ರಾಮೀಣ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಓಡಾಡುತ್ತಿಲ್ಲ, ಬಸ್ ಕೆಟ್ಟು ನಿಂತರೆ ಬೇರೆ ಬಸ್ ಬರುತ್ತಿಲ್ಲ. ವಿದ್ಯಾರ್ಥಿಗಳು ನಡೆದುಕೊಂಡು ಶಾಲೆ- ಕಾಲೇಜಿಗೆ ಹೋಗಬೇಕಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಸಾರಿಗೆ ಇಲಾಖೆಯವರು ಕನಕಗಿರಿಯಲ್ಲಿ ಬಸ್ ಘಟಕ ಇಲ್ಲದ ಪರಿಣಾಮ ಪರ್ಯಾಯ ವ್ಯವಸ್ಥೆ ಮಾಡಲು ಆಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಎಂದು ತಿಳಿಸಿದರು.</p>.<p>ಶಾಲಾ- ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಶಿಕ್ಷಕರನ್ನು ನೇಮಿಸಬೇಕು, ಬಿಸಿಎಂ ವಸತಿ ನಿಲಯಕ್ಕೆ ಹಳೆಯ ಮೆನೋ ಚಾರ್ಟ್ ನೀಡಬೇಕೆಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಹನುಮೇಶ, ವಿವಿಧ ಪದಾಧಿಕಾರಿಗಳಾದ ಬಾಲಾಜಿ ಚಳ್ಳಾರಿ, ರಮೇಶ, ಶಿವಕುಮಾರ, ಮಾರುತಿ, ಮೌನೇಶ, ದರ್ಶನ, ಮೌನೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸೇರಿದಂತೆ ವಿವಿಧ ತಾಲ್ಲೂಕು ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಕಾರ್ಯಕರ್ತರು ಇಲ್ಲಿನ ತಹಶೀಲ್ದಾರ್ ಕಚೇರಿ ಮುಂದೆ ಗುರುವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.</p>.<p>ತಾಲ್ಲೂಕು ಕೇಂದ್ರವಾಗಿ 8 ವರ್ಷ ಉರುಳಿದರೂ ಬಿಇಒ ಸೇರಿದಂತೆ ವಿದ್ಯಾರ್ಥಿಗಳಿಗೆ, ಜನರಿಗೆ ಉಪಯೋಗವಾಗುವ ಕಚೇರಿಗಳು ಆರಂಭಗೊಂಡಿಲ್ಲ. ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಎಸ್ಎಫ್ಐ ಕೇಂದ್ರ ಸಮಿತಿ ಸದಸ್ಯ ದೊಡ್ಡಬಸವರಾಜ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ ಈಚನಾಳ ತಿಳಿಸಿದರು.</p>.<p>ಬಸ್ ಘಟಕ ಮಂಜೂರು ಮಾಡದ ಹಿನ್ನಲೆಯಲ್ಲಿ ಗ್ರಾಮೀಣ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಓಡಾಡುತ್ತಿಲ್ಲ, ಬಸ್ ಕೆಟ್ಟು ನಿಂತರೆ ಬೇರೆ ಬಸ್ ಬರುತ್ತಿಲ್ಲ. ವಿದ್ಯಾರ್ಥಿಗಳು ನಡೆದುಕೊಂಡು ಶಾಲೆ- ಕಾಲೇಜಿಗೆ ಹೋಗಬೇಕಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಸಾರಿಗೆ ಇಲಾಖೆಯವರು ಕನಕಗಿರಿಯಲ್ಲಿ ಬಸ್ ಘಟಕ ಇಲ್ಲದ ಪರಿಣಾಮ ಪರ್ಯಾಯ ವ್ಯವಸ್ಥೆ ಮಾಡಲು ಆಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಎಂದು ತಿಳಿಸಿದರು.</p>.<p>ಶಾಲಾ- ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಶಿಕ್ಷಕರನ್ನು ನೇಮಿಸಬೇಕು, ಬಿಸಿಎಂ ವಸತಿ ನಿಲಯಕ್ಕೆ ಹಳೆಯ ಮೆನೋ ಚಾರ್ಟ್ ನೀಡಬೇಕೆಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಹನುಮೇಶ, ವಿವಿಧ ಪದಾಧಿಕಾರಿಗಳಾದ ಬಾಲಾಜಿ ಚಳ್ಳಾರಿ, ರಮೇಶ, ಶಿವಕುಮಾರ, ಮಾರುತಿ, ಮೌನೇಶ, ದರ್ಶನ, ಮೌನೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>