ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಗರಸಭೆ ಆಯುಕ್ತ ಗಣಪತಿ ಪಾಟೀಲ ‘ಸರ್ಕಾರಿ ಜಾಗವನ್ನು ಯಾರು ಬೇಕಾದರೂ ಒತ್ತುವರಿ ಮಾಡುವುದನ್ನು ಒಪ್ಪುವುದಿಲ್ಲ. ನಿರಾಶ್ರಿತರಿಗೆ ಆಶ್ರಯ ಮನೆ ಒದಗಿಸುವುದಾಗಿ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಎರಡ್ಮೂರು ದಿನಗಳ ಹಿಂದೆಯಷ್ಟೇ ಹೇಳಿದ್ದು, ಸೋಮವಾರ ಆಶ್ರಯ ಸಮಿತಿಯ ಸಭೆ ಕರೆದಿದ್ದಾರೆ. ಅಷ್ಟರಲ್ಲಿಯೇ ಜಾಗ ಒತ್ತುವರಿ ಮಾಡಲಾಗಿದೆ’ ಎಂದರು.