ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾವರಗೇರಾ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

Last Updated 1 ಮಾರ್ಚ್ 2021, 5:31 IST
ಅಕ್ಷರ ಗಾತ್ರ

ತಾವರಗೇರಾ: ಛತ್ರಪತಿ ಶಿವಾಜಿ ಯುವ ಬಳಗವು ವಿವಿಧ ಸಮುದಾಯಗಳ ಸಹಯೋಗದಲ್ಲಿ ಭಾನುವಾರ ಇಲ್ಲಿ ಶಿವಾಜಿ ಜಯಂತಿ ಆಚರಿಸಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಳಸ, ವಾದ್ಯಗಳೊಂದಿಗೆ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ನಡೆಯಿತು.

ಶ್ರೀರಾಮ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಶ್ಯಾಮೀದ್ ಅಲಿ ಸರ್ಕಲ್, ಹಳೆ ಬಸ್ ನಿಲ್ದಾಣದ ಮೂಲಕ ಮತ್ತೆ ಶ್ರೀರಾಮ ದೇವಸ್ಥಾನ ತಲುಪಿತು.

ಪಿಎಸ್‌ಐ ಗೀತಾಂಜಲಿ ಶಿಂಧೆ ನೇತೃತ್ವದಲ್ಲಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಶಿವು ಮರಾಠ, ಸಿದ್ದನಗೌಡ ಪುಂಡಗೌಡರ, ಭವನ ಕಲಾಲ್, ಮುತ್ತು ಶಿರವಾರ, ಪ್ರಶಾಂತ ಕಲಾಲ್, ನಾಗರಾಜ ಗೊಂದಾಳಿ, ನಾರಾಯಣ ಬಳ್ಳಾರಿ, ಮಂಜುನಾಥ.ಜೆ, ಛತ್ರಪತಿ ಶಿವಾಜಿ ಯುವ ಬಳಗದ ಸದಸ್ಯರು, ವಿವಿಧ ಸಮುದಾಯದ ಮುಖಂಡರು ಹಾಗೂ ಮಹಿಳೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT