ಮಾಧ್ಯಮಗಳ ಜೊತೆ ಮಾತನಾಡಿ ‘ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ತನಿಖೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಸಿಐಡಿ, ಲೋಕಾಯುಕ್ತದಿಂದಲೂ ತನಿಖೆ ನಡೆಯಲಿ ಎನ್ನುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತನಿಖೆಗೆ ಹಿಂದೇಟು ಹಾಕುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ಆದ್ದರಿಂದಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಜವಾಗಿ ಧಮ್ ಬಗ್ಗೆ ಮಾತನಾಡಿದ್ದಾರೆ’ ಎಂದರು.