ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ ವರ್ಷದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದವರ ಹೆಸರು ಹೇಳಿದ ಸಚಿವ ತಂಗಡಗಿ

Published 1 ನವೆಂಬರ್ 2023, 4:49 IST
Last Updated 1 ನವೆಂಬರ್ 2023, 4:49 IST
ಅಕ್ಷರ ಗಾತ್ರ

ಕೊಪ್ಪಳ: ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಬುಧವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ಪಡೆದವರ ಹೆಸರು ಓದಿ ಪೇಚಿಗೆ ಸಿಲುಕಿದರು.

ಈ ಬಾರಿ ಜಿಲ್ಲೆಯ ಮೂವರಿಗೆ ಪ್ರಶಸ್ತಿ ಲಭಿಸಿದೆ ಎಂದಷ್ಟೇ ಹೇಳಿದರೂ; ಯಾರ ಹೆಸರನ್ನೂ ಪ್ರಸ್ತಾಪಿಸಲಿಲ್ಲ.

ಜಿಲ್ಲೆಯ ತೊಗಲು ಗೊಂಬೆ ಕಲಾವಿದ ಕೇಶಪ್ಪ ಶಿಳ್ಳಿಕ್ಯಾತರ, ಸರ್ಕಾರಿ ಶಾಲೆಗೆ ಎರಡು ಎಕರೆ ಭೂಮಿ ದಾನ ನೀಡಿದ ಹುಚ್ಚಮ್ಮ ಬಸಪ್ಪ ಚೌದ್ರಿ ಹಾಗೂ ಹಗಲುವೇಷ ಕಲಾವಿದ ಸಿದ್ದಾಪುರದ ವಿಭೂತಿ ಗುಂಡಪ್ಪ ಅವರಿಗೆ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೇ ಪ್ರಶಸ್ತಿ ನೀಡಿದರೂ ಈ ವರ್ಷ ಪ್ರಶಸ್ತಿ ಪಡೆದವರ ಹೆಸರು ಸಚಿವರ ಭಾಷಣದಲ್ಲಿ ಸೇರಿಸದೇ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ.

ಬದಲಿಗೆ ಕಳೆದ ವರ್ಷ ಪ್ರಶಸ್ತಿ ಪಡೆದ ಶಂಕ್ರಪ್ಪ ಹೊರಪೇಟಿ‌ ಹಾಗೂ ಸಣ್ಣ ರಂಗಪ್ಪ ಚಿತ್ರಗಾರ ಹೆಸರು ಹಾಕಿದ್ದಾರೆ. ಅವರ ಹೆಸರುಗಳನ್ನೇ ಸಚಿವರು ಓದಿದರು.

ತಕ್ಷಣ ಎಚ್ಚೆತ್ತುಕೊಂಡ ಅವರು ಈ ವರ್ಷ ಮೂವರು ಗಣ್ಯರಿಗೆ ರಾಜ್ಯೋತ್ಸವ ನೀಡಲಾಗಿದೆ ಎಂದು ತಪ್ಪು ಸರಿಪಡಿಸಿ ಭಾಷಣ ಮುಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT