ಕೊಪ್ಪಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾಂತರ ಮಾಡಿರುವ ಶಾಸಕರು ಈವರೆಗೆ ನನ್ನನ್ನು ಭೇಟಿ ಮಾಡಿಲ್ಲ. ಆದರೆ, ಅಸಮಾಧಾನಗೊಂಡಿರುವ ಬಿಜೆಪಿಯ ಕೆಲವು ಶಾಸಕರು ಭೇಟಿ ಮಾಡಿದ್ದಾರೆ. ಅವರೇ ಹೇಳುವ ಪ್ರಕಾರ ಬಿಜೆಪಿ ಸರ್ಕಾರದಲ್ಲಿ ಏನೂ ನಡೆಯುತ್ತಿಲ್ಲ. ಇಲ್ಲಿ ಸಂವಿಧಾನಾತ್ಮಕ ಮತ್ತು ಅಸಂವಿಧಾನಾತ್ಮಕ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಮುಖ್ಯಮಂತ್ರಿ ಅವರ ಮಗ ವಿಜಯೇಂದ್ರ ಅಸಂವಿಧಾನಾತ್ಮಕ ಮುಖ್ಯಮಂತ್ರಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.