<p><strong>ಕೊಪ್ಪಳ:</strong> ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನಲ್ಲ. ಕೆಲವರನ್ನು ಓಲೈಸಲು ಹಾಗೆ ಹೇಳಿಕೆ ನೀಡುತ್ತಿರುತ್ತಾರೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೋ ಹತ್ಯೆ ನಿಷೇಧ ನೂತನ ಕಾನೂನು ಅಡಿ, ಗೋ ಹತ್ಯೆ ಮಾಡಿದರೆ ₹5 ಲಕ್ಷ ದಂಡ ಮತ್ತು 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಗೋಮಾಂಸ ತಿನ್ನಲು ಪ್ರಚೋದಿಸುವವರಿಗೂ ಶಿಕ್ಷೆ ವಿಧಿಸುವ ಅಂಶ ಸೇರಿಸುವ ಚಿಂತನೆಯೂ ಇದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರು, ನಾನು ಗೋಮಾಂಸ ತಿನ್ನುತ್ತೇನೆ ಎಂದು ಎದೆತಟ್ಟಿಕೊಂಡು ಹೇಳುತ್ತಾರೆ. ಹಾಗೆ ಮಾಡಿದರೆ ಅವರನ್ನೂ ಒಳಗೆ ಹಾಕುತ್ತೇವೆ’ ಎಂದು ಹೇಳಿದರು.</p>.<p>‘ಈ ವಿಷಯದಲ್ಲಿ ಜನರ ಮನಸ್ಸನ್ನು ಘಾಸಿಗೊಳಿಸುವುದು ಕೂಡಾ ಕಾನೂನು ಬಾಹಿರ’ ಎಂದು ಎಚ್ಚರಿಕೆ ನೀಡಿದರು.</p>.<p>‘ಏನ್ರಿ ಪ್ರಭು ಚವ್ಹಾಣ್’ ಎಂದುಸಿದ್ದರಾಮಯ್ಯ ಶೈಲಿಯಲ್ಲಿ ಸಂಬೋಂಧಿಸಿಆಂಗಿಕ ಭಾವನೆ ಮಾಡಿ ಲೇವಡಿ ಮಾಡಿದ ಅವರು ‘ಗೋವು ಕೋಟ್ಯಂತರ ಹಿಂದೂಗಳಿಗೆ ಪೂಜ್ಯನೀಯವಾದ ಮತ್ತು ತಾಯಿ ಸ್ಥಾನದಲ್ಲಿರುವ ದೇವರ ಸ್ವರೂಪ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನಲ್ಲ. ಕೆಲವರನ್ನು ಓಲೈಸಲು ಹಾಗೆ ಹೇಳಿಕೆ ನೀಡುತ್ತಿರುತ್ತಾರೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೋ ಹತ್ಯೆ ನಿಷೇಧ ನೂತನ ಕಾನೂನು ಅಡಿ, ಗೋ ಹತ್ಯೆ ಮಾಡಿದರೆ ₹5 ಲಕ್ಷ ದಂಡ ಮತ್ತು 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಗೋಮಾಂಸ ತಿನ್ನಲು ಪ್ರಚೋದಿಸುವವರಿಗೂ ಶಿಕ್ಷೆ ವಿಧಿಸುವ ಅಂಶ ಸೇರಿಸುವ ಚಿಂತನೆಯೂ ಇದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರು, ನಾನು ಗೋಮಾಂಸ ತಿನ್ನುತ್ತೇನೆ ಎಂದು ಎದೆತಟ್ಟಿಕೊಂಡು ಹೇಳುತ್ತಾರೆ. ಹಾಗೆ ಮಾಡಿದರೆ ಅವರನ್ನೂ ಒಳಗೆ ಹಾಕುತ್ತೇವೆ’ ಎಂದು ಹೇಳಿದರು.</p>.<p>‘ಈ ವಿಷಯದಲ್ಲಿ ಜನರ ಮನಸ್ಸನ್ನು ಘಾಸಿಗೊಳಿಸುವುದು ಕೂಡಾ ಕಾನೂನು ಬಾಹಿರ’ ಎಂದು ಎಚ್ಚರಿಕೆ ನೀಡಿದರು.</p>.<p>‘ಏನ್ರಿ ಪ್ರಭು ಚವ್ಹಾಣ್’ ಎಂದುಸಿದ್ದರಾಮಯ್ಯ ಶೈಲಿಯಲ್ಲಿ ಸಂಬೋಂಧಿಸಿಆಂಗಿಕ ಭಾವನೆ ಮಾಡಿ ಲೇವಡಿ ಮಾಡಿದ ಅವರು ‘ಗೋವು ಕೋಟ್ಯಂತರ ಹಿಂದೂಗಳಿಗೆ ಪೂಜ್ಯನೀಯವಾದ ಮತ್ತು ತಾಯಿ ಸ್ಥಾನದಲ್ಲಿರುವ ದೇವರ ಸ್ವರೂಪ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>