<p><strong>ಕೊಪ್ಪಳ:</strong> ‘ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ನಿರಂತರ ಅನ್ಯಾಯದ ನಡುವೆಯೂ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಈ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ಧವಿದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಪ್ರಶ್ನಿಸಿದರು.</p><p>‘ಗ್ಯಾರಂಟಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಲ್ಲಿ ₹1 ಲಕ್ಷ ಕೋಟಿ ಖರ್ಚು ಮಾಡಿಯೂ ಪ್ರತಿ ಜಿಲ್ಲೆಗಳಿಗೂ ಅಭಿವೃದ್ಧಿಗೆ ಅನುದಾನ ನೀಡಲಾ ಗುತ್ತಿದೆ’ ಎಂದು ಪ್ರತಿಪಾದಿಸಿದರು. </p><p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಒಟ್ಟು ₹2,000 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸರ್ಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p><p>‘ಸರ್ಕಾರದಲ್ಲಿ ಹಣವಿಲ್ಲ, ಖಜಾನೆ ಖಾಲಿಯಾಗಿದೆ ಎನ್ನುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಣವಿಲ್ಲದಿದ್ದರೂ ಹೊಸ ಯೋಜನೆಗಳಿಗೆ ಚಾಲನೆ ನೀಡಿ ನಮ್ಮನ್ನು ಸಂಕಷ್ಟಕ್ಕೆ ದೂಡಿದ್ದರು. ನಾವೀಗ ಆರ್ಥಿಕವಾಗಿ ಸದೃಢವಾಗಿದ್ದೇವೆ. ತಲಾ ಆದಾಯದಲ್ಲಿ ರಾಜ್ಯ ಈಗ ದೇಶದಲ್ಲಿಯೇ ಅಗ್ರಸ್ಥಾನದಲ್ಲಿರುವುದು ಇದಕ್ಕೆ ಸಾಕ್ಷಿ’ ಎಂದು ನುಡಿದರು.</p><p>ರಾಜ್ಯ ಸರ್ಕಾರದಲ್ಲಿ ಹಣವಿಲ್ಲದಿದ್ದರೆ ಕೊಪ್ಪಳ ಜಿಲ್ಲೆಯಲ್ಲಿ ₹2000 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.</p><p>‘ಈವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹13 ಸಾವಿರ ಕೋಟಿ ನೀಡಿದ್ದೇನೆ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ರೈತರಿಗೆ ₹80 ಸಾವಿರ ಕೋಟಿ ಪರಿಹಾರ ಒದಗಿಸಿದ್ದೇನೆ. ಬಿಜೆಪಿಯವರು ನಿತ್ಯ ಹೇಳುವ ಸುಳ್ಳುಗಳಿಗೆ ರಾಜ್ಯದ ಜನ ತಮ್ಮ ಬುದ್ಧಿ ಒತ್ತೆ ಇಡಬಾರದು’ ಎಂದು ಮನವಿ ಮಾಡಿದರು.</p><p>ಗ್ಯಾರಂಟಿ ಯೋಜನೆಗಳಿಂದ ಜನರಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯ ಆರ್ಥಿಕ ಪ್ರಗತಿ ಕಂಡಿದೆ ಎಂದು ಅವರು ಹೇಳಿದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ನಿರಂತರ ಅನ್ಯಾಯದ ನಡುವೆಯೂ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಈ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ಧವಿದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಪ್ರಶ್ನಿಸಿದರು.</p><p>‘ಗ್ಯಾರಂಟಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಲ್ಲಿ ₹1 ಲಕ್ಷ ಕೋಟಿ ಖರ್ಚು ಮಾಡಿಯೂ ಪ್ರತಿ ಜಿಲ್ಲೆಗಳಿಗೂ ಅಭಿವೃದ್ಧಿಗೆ ಅನುದಾನ ನೀಡಲಾ ಗುತ್ತಿದೆ’ ಎಂದು ಪ್ರತಿಪಾದಿಸಿದರು. </p><p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಒಟ್ಟು ₹2,000 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸರ್ಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p><p>‘ಸರ್ಕಾರದಲ್ಲಿ ಹಣವಿಲ್ಲ, ಖಜಾನೆ ಖಾಲಿಯಾಗಿದೆ ಎನ್ನುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಣವಿಲ್ಲದಿದ್ದರೂ ಹೊಸ ಯೋಜನೆಗಳಿಗೆ ಚಾಲನೆ ನೀಡಿ ನಮ್ಮನ್ನು ಸಂಕಷ್ಟಕ್ಕೆ ದೂಡಿದ್ದರು. ನಾವೀಗ ಆರ್ಥಿಕವಾಗಿ ಸದೃಢವಾಗಿದ್ದೇವೆ. ತಲಾ ಆದಾಯದಲ್ಲಿ ರಾಜ್ಯ ಈಗ ದೇಶದಲ್ಲಿಯೇ ಅಗ್ರಸ್ಥಾನದಲ್ಲಿರುವುದು ಇದಕ್ಕೆ ಸಾಕ್ಷಿ’ ಎಂದು ನುಡಿದರು.</p><p>ರಾಜ್ಯ ಸರ್ಕಾರದಲ್ಲಿ ಹಣವಿಲ್ಲದಿದ್ದರೆ ಕೊಪ್ಪಳ ಜಿಲ್ಲೆಯಲ್ಲಿ ₹2000 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.</p><p>‘ಈವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹13 ಸಾವಿರ ಕೋಟಿ ನೀಡಿದ್ದೇನೆ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ರೈತರಿಗೆ ₹80 ಸಾವಿರ ಕೋಟಿ ಪರಿಹಾರ ಒದಗಿಸಿದ್ದೇನೆ. ಬಿಜೆಪಿಯವರು ನಿತ್ಯ ಹೇಳುವ ಸುಳ್ಳುಗಳಿಗೆ ರಾಜ್ಯದ ಜನ ತಮ್ಮ ಬುದ್ಧಿ ಒತ್ತೆ ಇಡಬಾರದು’ ಎಂದು ಮನವಿ ಮಾಡಿದರು.</p><p>ಗ್ಯಾರಂಟಿ ಯೋಜನೆಗಳಿಂದ ಜನರಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯ ಆರ್ಥಿಕ ಪ್ರಗತಿ ಕಂಡಿದೆ ಎಂದು ಅವರು ಹೇಳಿದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>