<p><strong>ಕೊಪ್ಪಳ:</strong> ‘ಜಂಗಮರು ಪೂರ್ವಜರ ಆಚಾರ ವಿಚಾರಗಳನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಧರ್ಮರಕ್ಷಣೆಗೆ ಮುಂದಾಗಬೇಕು. ಪ್ರತಿಯೊಬ್ಬ ಮನುಷ್ಯ ಧರ್ಮ ಸಂಸ್ಕಾರಗಳ ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ’ ಎಂದು ಮೈನಳ್ಳಿ-ಬಿಕನಳ್ಳಿಯ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.</p>.<p>ನಗರದ ರೇಣುಕಾಚಾರ್ಯ ಮಂದಿರದಲ್ಲಿ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ, ಪತ್ತಿನ ಸಹಕಾರ ಸಂಘ ಇವುಗಳ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರದ ಪ್ರಯುಕ್ತ ಭಾನುವಾರ ನಡೆದ ಜಂಗಮ ವಟುಗಳಿಗೆ ಅಯ್ಯಾಚಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಎಂಟು ವರ್ಷ ವಯಸ್ಸಿನ ಎಲ್ಲ ಜಂಗಮರು ಸಂಪ್ರದಾಯದಂತೆ ಅಯ್ಯಾಚಾರ ದೀಕ್ಷೆ ಪಡೆಯಬೇಕು. ಶಿವದೀಕ್ಷಾ ಪಡೆದ ವಟುಗಳು ಜೀವನದುದ್ದಕ್ಕೂ ನಿತ್ಯ ಸ್ನಾನದ ನಂತರ ಶಿವಪೂಜೆ ನೆರವೇರಿಸಬೇಕು, ಇದರಿಂದ ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ದೊರೆಯುತ್ತದೆ’ ಎಂದರು.</p>.<p>ಬ್ರಾಹ್ಮಿ ಮುಹೂರ್ತದಲ್ಲಿ 15ಕ್ಕೂ ಹೆಚ್ಚು ಜಂಗಮ ವಟುಗಳಿಗೆ ಸ್ವಾಮೀಜಿ ಅಯ್ಯಾಚಾರ ದೀಕ್ಷೆ ನೀಡಿದರು. ಇದಕ್ಕೂ ಮುನ್ನ ರೇಣುಕಾಚಾರ್ಯರ ಮೂರ್ತಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ಮಹಾಪೂಜೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಜಂಗಮರು ಪೂರ್ವಜರ ಆಚಾರ ವಿಚಾರಗಳನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಧರ್ಮರಕ್ಷಣೆಗೆ ಮುಂದಾಗಬೇಕು. ಪ್ರತಿಯೊಬ್ಬ ಮನುಷ್ಯ ಧರ್ಮ ಸಂಸ್ಕಾರಗಳ ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ’ ಎಂದು ಮೈನಳ್ಳಿ-ಬಿಕನಳ್ಳಿಯ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.</p>.<p>ನಗರದ ರೇಣುಕಾಚಾರ್ಯ ಮಂದಿರದಲ್ಲಿ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ, ಪತ್ತಿನ ಸಹಕಾರ ಸಂಘ ಇವುಗಳ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರದ ಪ್ರಯುಕ್ತ ಭಾನುವಾರ ನಡೆದ ಜಂಗಮ ವಟುಗಳಿಗೆ ಅಯ್ಯಾಚಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಎಂಟು ವರ್ಷ ವಯಸ್ಸಿನ ಎಲ್ಲ ಜಂಗಮರು ಸಂಪ್ರದಾಯದಂತೆ ಅಯ್ಯಾಚಾರ ದೀಕ್ಷೆ ಪಡೆಯಬೇಕು. ಶಿವದೀಕ್ಷಾ ಪಡೆದ ವಟುಗಳು ಜೀವನದುದ್ದಕ್ಕೂ ನಿತ್ಯ ಸ್ನಾನದ ನಂತರ ಶಿವಪೂಜೆ ನೆರವೇರಿಸಬೇಕು, ಇದರಿಂದ ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ದೊರೆಯುತ್ತದೆ’ ಎಂದರು.</p>.<p>ಬ್ರಾಹ್ಮಿ ಮುಹೂರ್ತದಲ್ಲಿ 15ಕ್ಕೂ ಹೆಚ್ಚು ಜಂಗಮ ವಟುಗಳಿಗೆ ಸ್ವಾಮೀಜಿ ಅಯ್ಯಾಚಾರ ದೀಕ್ಷೆ ನೀಡಿದರು. ಇದಕ್ಕೂ ಮುನ್ನ ರೇಣುಕಾಚಾರ್ಯರ ಮೂರ್ತಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ಮಹಾಪೂಜೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>