ಹಿಂದೆ ರಾಜ ಮಹಾರಾಜರು, ಸುತ್ತಲಿನ ಗ್ರಾಮಗಳ ದೇಸಾಯಿ ಮನೆತನದವರು, ಗೌಡರು ಮರುಳಸಿದ್ದರಿಗೆ ಭಕ್ತಿಯಿಂದ ತಲೆಬಾಗಿ ಕರ್ಪೂರ ಅರ್ಪಿಸುತ್ತಿದ್ದರು. ಈ ಮೂಲಕ ತಮ್ಮ ಭಕ್ತಿ ಸಮರ್ಪಿಸಿದ್ದಾರೆ. ಶರಣರಾದ ಗೋಣಿ ಸ್ವಾಮಿ ಹಾಗೂ ಮೈಲಾರ ಲಿಂಗಪ್ಪನವರು ಮರುಳಸಿದ್ದರ ಸಮಕಾಲೀನರಾಗಿದ್ದರು. ಈಗಿನ ದೇವಸ್ಥಾನದ ಹಿಂಭಾಗದಲ್ಲಿ ಎರಡು ಗೋಣಿ ಬಸವೇಶ್ವರ ದೇವಸ್ಥಾನಗಳನ್ನು ನಿರ್ಮಿಸಿ ಗುರುಗಳ ಜೊತೆ ಸದಾ ಇರುವುದು ಇಂದಿಗೂ ಪ್ರತೀತಿ.