<p><strong>ಅಳವಂಡಿ: ಗ್ರಾ</strong>ಮದ ಆರಾಧ್ಯದೈವ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಶನಿವಾರ ತೆರೆ ಬಿದ್ದಿತು.</p>.<p>ಬೆಳಿಗ್ಗೆ ಸಿದ್ದೇಶ್ವರ ದೇವರಿಗೆ ಭಕ್ತರು ಅಭಿಷೇಕ, ಅಲಂಕಾರಿಕ ಪೂಜೆ ಸಲ್ಲಿಸಿದರು. ಅಳವಂಡಿ, ಹಲವಾಗಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ದೀರ್ಘ ದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದರು. ದೇವರಿಗೆ ನೈವೇದ್ಯ, ಕಾಯಿ ಮತ್ತು ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು.</p>.<p>ಮಠದ ಪೀಠಾಧಿಪತಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಜಂಗಮ ವಟುಗಳಿಗೆ ಶೀವದೀಕ್ಷೆ ನೀಡಿ ಧರ್ಮೋಪದೇಶ ಬೋಧನೆ ಮಾಡಿದರು. ನಂತರ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ನಂತರ ಸಂಜೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವವು ವಿವಿಧ ವಾದ್ಯ ವೈಭವದೊಂದಿಗೆ ಜರುಗಿತು. ಭವ್ಯ ಮೆರವಣಿಗೆಯು ಗ್ರಾಮದ ರಾಜಬೀದಿಯಲ್ಲಿ ಅದ್ಧೂರಿಯಾಗಿ ಸಾಗಿತು. ಅಡ್ಡಪಲ್ಲಕ್ಕಿ ಉತ್ಸವಕ್ಕೆ ಹಲಗೆಯ ನಾದ, ಜಾಂಜ್ ಮೇಳಗಳು ಕಳೆ ತಂದವು.</p>.<p>ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಅಳವಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ಮುದ್ದು ಸುಡುವ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ: ಗ್ರಾ</strong>ಮದ ಆರಾಧ್ಯದೈವ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಶನಿವಾರ ತೆರೆ ಬಿದ್ದಿತು.</p>.<p>ಬೆಳಿಗ್ಗೆ ಸಿದ್ದೇಶ್ವರ ದೇವರಿಗೆ ಭಕ್ತರು ಅಭಿಷೇಕ, ಅಲಂಕಾರಿಕ ಪೂಜೆ ಸಲ್ಲಿಸಿದರು. ಅಳವಂಡಿ, ಹಲವಾಗಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ದೀರ್ಘ ದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದರು. ದೇವರಿಗೆ ನೈವೇದ್ಯ, ಕಾಯಿ ಮತ್ತು ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು.</p>.<p>ಮಠದ ಪೀಠಾಧಿಪತಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಜಂಗಮ ವಟುಗಳಿಗೆ ಶೀವದೀಕ್ಷೆ ನೀಡಿ ಧರ್ಮೋಪದೇಶ ಬೋಧನೆ ಮಾಡಿದರು. ನಂತರ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ನಂತರ ಸಂಜೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವವು ವಿವಿಧ ವಾದ್ಯ ವೈಭವದೊಂದಿಗೆ ಜರುಗಿತು. ಭವ್ಯ ಮೆರವಣಿಗೆಯು ಗ್ರಾಮದ ರಾಜಬೀದಿಯಲ್ಲಿ ಅದ್ಧೂರಿಯಾಗಿ ಸಾಗಿತು. ಅಡ್ಡಪಲ್ಲಕ್ಕಿ ಉತ್ಸವಕ್ಕೆ ಹಲಗೆಯ ನಾದ, ಜಾಂಜ್ ಮೇಳಗಳು ಕಳೆ ತಂದವು.</p>.<p>ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಅಳವಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ಮುದ್ದು ಸುಡುವ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>