<p><strong>ಕೊಪ್ಪಳ: </strong>ಕೋವಿಡ್ ಹಿನ್ನೆಲೆಯಲ್ಲಿ ಶನಿವಾರ ಗವಿಮಠದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವಸರಳವಾಗಿ ನಡೆಯಿತು.</p>.<p>ವಿವಿಧ ಧಾರ್ಮಿಕ ಕಾರ್ಯಗಳ ಮಧ್ಯೆ ಬಿಜಕಲ್ ನ ಚೆನ್ನವೀರ ಸ್ವಾಮೀಜಿ ರಥೋತ್ಸವಕ್ಕೆ ನಿಶಾನೆ ತೋರಿಸಿ ಚಾಲನೆ ನೀಡಿದರು.</p>.<p>ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭಕ್ತರ ಜಯಘೋಷಗಳ ಮಧ್ಯೆ ರಥವನ್ನು ಪಾದಗಟ್ಟೆವರೆಗೆ ಎಳೆದರು.</p>.<p>ತೇರನೆಳೆಯಲು ಈ ಸಾರಿ ಭಕ್ತರಿಗೆ ಅವಕಾಶ ನೀಡಿರಲಿಲ್ಲ. ಮಠದ ಸ್ವಯಂ ಸೇವಕರು ರಥವನ್ನು ಎಳೆದರು.</p>.<p>ದೂರದಿಂದಲೇ ಕಣ್ತುಂಬಿಕೊಂಡ ಭಕ್ತರು ಉತ್ತತ್ತಿ, ಬಾಳೆ ಹಣ್ಣು, ಕಬ್ಬು, ಹೂಗಳನ್ನು ಎಸೆದು ಕೃತಾರ್ಥರಾದರು.</p>.<p>8.45 ಕ್ಕೆ ರಥೋತ್ಸವ ಆರಂಭವಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಶಾಸಕರಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ, ರಾಘವೇಂದ್ರ ಹಿಟ್ನಾಳ, ಬಸವರಾಜ ದಡೇಸಗೂರ, ಅಮರೇಶ ಕರಡಿ ಮುಂತಾದವರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಕೋವಿಡ್ ಹಿನ್ನೆಲೆಯಲ್ಲಿ ಶನಿವಾರ ಗವಿಮಠದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವಸರಳವಾಗಿ ನಡೆಯಿತು.</p>.<p>ವಿವಿಧ ಧಾರ್ಮಿಕ ಕಾರ್ಯಗಳ ಮಧ್ಯೆ ಬಿಜಕಲ್ ನ ಚೆನ್ನವೀರ ಸ್ವಾಮೀಜಿ ರಥೋತ್ಸವಕ್ಕೆ ನಿಶಾನೆ ತೋರಿಸಿ ಚಾಲನೆ ನೀಡಿದರು.</p>.<p>ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭಕ್ತರ ಜಯಘೋಷಗಳ ಮಧ್ಯೆ ರಥವನ್ನು ಪಾದಗಟ್ಟೆವರೆಗೆ ಎಳೆದರು.</p>.<p>ತೇರನೆಳೆಯಲು ಈ ಸಾರಿ ಭಕ್ತರಿಗೆ ಅವಕಾಶ ನೀಡಿರಲಿಲ್ಲ. ಮಠದ ಸ್ವಯಂ ಸೇವಕರು ರಥವನ್ನು ಎಳೆದರು.</p>.<p>ದೂರದಿಂದಲೇ ಕಣ್ತುಂಬಿಕೊಂಡ ಭಕ್ತರು ಉತ್ತತ್ತಿ, ಬಾಳೆ ಹಣ್ಣು, ಕಬ್ಬು, ಹೂಗಳನ್ನು ಎಸೆದು ಕೃತಾರ್ಥರಾದರು.</p>.<p>8.45 ಕ್ಕೆ ರಥೋತ್ಸವ ಆರಂಭವಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಶಾಸಕರಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ, ರಾಘವೇಂದ್ರ ಹಿಟ್ನಾಳ, ಬಸವರಾಜ ದಡೇಸಗೂರ, ಅಮರೇಶ ಕರಡಿ ಮುಂತಾದವರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>