<p><strong>ಕೊಪ್ಪಳ</strong>: ‘ಈಗಾಗಲೇ ಸ್ಮಶಾನಕ್ಕೆ ಕಾಯ್ದಿರಿಸಿದ ಜಮೀನು ವಾರದೊಳಗೆ ಪಂಚಾಯಿತಿ ಹೆಸರಿಗೆ ಪಹಣಿ ಆಗಲಿದ್ದು, ಎಲ್ಲ ಸಮಾಜದ ಅಧ್ಯಕ್ಷರನ್ನೊಳಗೊಂಡ ಸ್ಮಶಾನ ಅಭಿವೃದ್ಧಿ ಸಮಿತಿ ರಚಿಸಿ, ನೀಲನಕ್ಷೆ ಸಿದ್ಧಪಡಿಸಿ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ ಹ್ಯಾಟಿ ಹೇಳಿದರು.</p>.<p>ನಗರದ ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಎಲ್ಲ 28 ಸಮಾಜದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿಕೊಂಡು, ಸ್ಮಶಾನ ಅಭಿವೃದ್ಧಿ ಸಮಿತಿ ಮಾಡಬೇಕು. ಸರ್ಕಾರದ ಅನುದಾನದ ಜತೆಗೆ ಎಲ್ಲ ಸಮಾಜದವರ ಸಹಕಾರದೊಂದಿಗೆ ಅಭಿವೃದ್ಧಿ ಮಾಡುತ್ತೇವೆ. ವಿವಿಧ ಸಮಾಜದವರು ಸ್ವಯಂ ಪ್ರೇರಿತರಾಗಿ ವಾಹನ ಕೊಡಿಸುವುದಾಗಿ ತಿಳಿಸಿದ್ದಾರೆ’ ಎಂದರು.</p>.<p>ಇದಕ್ಕೆ ಸದಸ್ಯ ಮೋಹನ್ ಅರಕಲ್ಲ್ ಪ್ರತಿಕ್ರಿಯಿಸಿ, ಸ್ಮಶಾನಕ್ಕೆ ಶಾಸಕರು ₹2 ಕೋಟಿ ಕೊಡುತ್ತೇವೆಂದು ಭರವಸೆ ನೀಡಿದ್ದರು’. ಎಂದರು. ಬಳಿಕ ಅಧ್ಯಕ್ಷರು ಮಾತನಾಡಿ, ‘ಒಂದು ವಾರದಲ್ಲಿ ಸ್ಮಶಾನ ಪಂಚಾಯಿತಿ ಹೆಸರಲ್ಲಿ ಆಗಲಿದ್ದು, ಬಳಿಕ ಶಾಸಕರ ಬಳಿ ಹೋಗಿ ಅನುದಾನ ಕೇಳೋಣ ಎಂದು ಸ್ಪಷ್ಟಪಡಿಸಿದರು.</p>.<p>ಪುರಭವನ ಕಟ್ಟಡಕ್ಕೆ ಮಾರ್ಚ್ ನಂತರ ₹5 ಕೋಟಿ ಅನುದಾನ ನೀಡುವುದಾಗಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದ್ದು, ಈ ನಿಟ್ಟಿನಲ್ಲಿ ಪತ್ರವೂ ಬಂದಿದೆ. ಪಕ್ಕದ ಖಾದಿ ಗ್ರಾಮೋದ್ಯೋಗ ಮಂಡಳಿಗೆ ನೀಡಿದ್ದ ಜಾಗವನ್ನೂ ಹಿಂಪಡೆದರೆ, ಅನುಕೂಲ ಆಗಲಿದೆ. ಇದಕ್ಕೆ ಕ್ರಮ ವಹಿಸಲಾಗುತ್ತಿದೆ’ ಎಂದರು.</p>.<p>ಪತ್ರಕರ್ತ ದಿ.ವಿಠ್ಠಪ್ಪ ಗೋರಂಟ್ಲಿ ಹೆಸರನ್ನು ಪಟ್ಟಣದ ಗಾಂಧೀಜಿ ವೃತ್ತದಿಂದ ಅವರ ಮನೆಗೆ ತೆರಳುವ ಬಜಾರ ರಸ್ತೆಗೆ ನಾಮಕರಣ ಮಾಡುವಂತೆ ಸದಸ್ಯ ಸವಿತಾ ಗೋರಂಟ್ಲಿ ತಿಳಿಸಿದ್ದು, ಇದಕ್ಕೆ ಅಧ್ಯಕ್ಷರು ಮತ್ತು ಸದಸ್ಯರು ಒಪ್ಪಿಗೆ ನೀಡಿದರು.</p>.<p>ಪಟ್ಟಣಕ್ಕೆ ಕ್ರೀಡಾಂಗಣ ಮಂಜೂರು ಮಾಡುವಂತೆ ಸದಸ್ಯ ಗವಿಸಿದ್ದಪ್ಪ ಮಗಿಮಾವಿನಳ್ಳಿ ಒತ್ತಾಯಿಸಿದರು. ಸದಸ್ಯ ಪರಶುರಾಮ ನಾಯಕ್, ಉಪಾಧ್ಯಕ್ಷ ಹೊನ್ನುರಸಾಬ್ ಬೈರಾಪುರ, ಮುಖ್ಯಾಧಿಕಾರಿ ಸುರೇಶ ಬಬಲಾದಿ ಇದ್ದರು.</p>
<p><strong>ಕೊಪ್ಪಳ</strong>: ‘ಈಗಾಗಲೇ ಸ್ಮಶಾನಕ್ಕೆ ಕಾಯ್ದಿರಿಸಿದ ಜಮೀನು ವಾರದೊಳಗೆ ಪಂಚಾಯಿತಿ ಹೆಸರಿಗೆ ಪಹಣಿ ಆಗಲಿದ್ದು, ಎಲ್ಲ ಸಮಾಜದ ಅಧ್ಯಕ್ಷರನ್ನೊಳಗೊಂಡ ಸ್ಮಶಾನ ಅಭಿವೃದ್ಧಿ ಸಮಿತಿ ರಚಿಸಿ, ನೀಲನಕ್ಷೆ ಸಿದ್ಧಪಡಿಸಿ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ ಹ್ಯಾಟಿ ಹೇಳಿದರು.</p>.<p>ನಗರದ ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಎಲ್ಲ 28 ಸಮಾಜದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿಕೊಂಡು, ಸ್ಮಶಾನ ಅಭಿವೃದ್ಧಿ ಸಮಿತಿ ಮಾಡಬೇಕು. ಸರ್ಕಾರದ ಅನುದಾನದ ಜತೆಗೆ ಎಲ್ಲ ಸಮಾಜದವರ ಸಹಕಾರದೊಂದಿಗೆ ಅಭಿವೃದ್ಧಿ ಮಾಡುತ್ತೇವೆ. ವಿವಿಧ ಸಮಾಜದವರು ಸ್ವಯಂ ಪ್ರೇರಿತರಾಗಿ ವಾಹನ ಕೊಡಿಸುವುದಾಗಿ ತಿಳಿಸಿದ್ದಾರೆ’ ಎಂದರು.</p>.<p>ಇದಕ್ಕೆ ಸದಸ್ಯ ಮೋಹನ್ ಅರಕಲ್ಲ್ ಪ್ರತಿಕ್ರಿಯಿಸಿ, ಸ್ಮಶಾನಕ್ಕೆ ಶಾಸಕರು ₹2 ಕೋಟಿ ಕೊಡುತ್ತೇವೆಂದು ಭರವಸೆ ನೀಡಿದ್ದರು’. ಎಂದರು. ಬಳಿಕ ಅಧ್ಯಕ್ಷರು ಮಾತನಾಡಿ, ‘ಒಂದು ವಾರದಲ್ಲಿ ಸ್ಮಶಾನ ಪಂಚಾಯಿತಿ ಹೆಸರಲ್ಲಿ ಆಗಲಿದ್ದು, ಬಳಿಕ ಶಾಸಕರ ಬಳಿ ಹೋಗಿ ಅನುದಾನ ಕೇಳೋಣ ಎಂದು ಸ್ಪಷ್ಟಪಡಿಸಿದರು.</p>.<p>ಪುರಭವನ ಕಟ್ಟಡಕ್ಕೆ ಮಾರ್ಚ್ ನಂತರ ₹5 ಕೋಟಿ ಅನುದಾನ ನೀಡುವುದಾಗಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದ್ದು, ಈ ನಿಟ್ಟಿನಲ್ಲಿ ಪತ್ರವೂ ಬಂದಿದೆ. ಪಕ್ಕದ ಖಾದಿ ಗ್ರಾಮೋದ್ಯೋಗ ಮಂಡಳಿಗೆ ನೀಡಿದ್ದ ಜಾಗವನ್ನೂ ಹಿಂಪಡೆದರೆ, ಅನುಕೂಲ ಆಗಲಿದೆ. ಇದಕ್ಕೆ ಕ್ರಮ ವಹಿಸಲಾಗುತ್ತಿದೆ’ ಎಂದರು.</p>.<p>ಪತ್ರಕರ್ತ ದಿ.ವಿಠ್ಠಪ್ಪ ಗೋರಂಟ್ಲಿ ಹೆಸರನ್ನು ಪಟ್ಟಣದ ಗಾಂಧೀಜಿ ವೃತ್ತದಿಂದ ಅವರ ಮನೆಗೆ ತೆರಳುವ ಬಜಾರ ರಸ್ತೆಗೆ ನಾಮಕರಣ ಮಾಡುವಂತೆ ಸದಸ್ಯ ಸವಿತಾ ಗೋರಂಟ್ಲಿ ತಿಳಿಸಿದ್ದು, ಇದಕ್ಕೆ ಅಧ್ಯಕ್ಷರು ಮತ್ತು ಸದಸ್ಯರು ಒಪ್ಪಿಗೆ ನೀಡಿದರು.</p>.<p>ಪಟ್ಟಣಕ್ಕೆ ಕ್ರೀಡಾಂಗಣ ಮಂಜೂರು ಮಾಡುವಂತೆ ಸದಸ್ಯ ಗವಿಸಿದ್ದಪ್ಪ ಮಗಿಮಾವಿನಳ್ಳಿ ಒತ್ತಾಯಿಸಿದರು. ಸದಸ್ಯ ಪರಶುರಾಮ ನಾಯಕ್, ಉಪಾಧ್ಯಕ್ಷ ಹೊನ್ನುರಸಾಬ್ ಬೈರಾಪುರ, ಮುಖ್ಯಾಧಿಕಾರಿ ಸುರೇಶ ಬಬಲಾದಿ ಇದ್ದರು.</p>