ಪಟ್ಟಣದ ಸಂಸ್ಥಾನ ಹಿರೇಮಠದ ಸಿದ್ಧರಾಮೇಶ್ವರ ಸ್ವಾಮೀಜಿಯವರ 24ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಪ್ರಯುಕ್ತ ಆಯೋಜಿಸಿದ್ದ ತುಲಾಭಾರ, ಗೌರವ ಸಮರ್ಪಣೆ, ಉಪನ್ಯಾಸ, ಸಂಗೀತ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಂಗೀತ, ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ವಿಶೇಷ ಕೊಡುಗೆ ನೀಡುತ್ತಿರುವ ಮಠಗಳು ಸಮುದಾಯ ಸಂಘಟನೆಯಲ್ಲಿ ಸಾಕಷ್ಟು ಬದಲಾವಣೆ ತರುವ ಕೆಲಸ ಮಾಡುತ್ತಿವೆ. ಭಕ್ತರಿಂದ ಹಾಗೂ ಭಕ್ತರಿಗಾಗಿಯೇ ಇರುವ ಮಠಗಳು ಶ್ರದ್ಧಾ ಕೇಂದ್ರಗಳಾಗಿ, ಧಾರ್ಮಿಕ ಚಟುವಟಿಕೆಗಳ ವೇದಿಕೆಗಳಾಗಿ ರೂಪುಗೊಂಡಿವೆ ಎಂದು ನುಡಿದರು.