ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ ಹಿಂಸಾಚಾರ ಖಂಡಿಸಿ ಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ಪ್ರತಿಭಟನೆ

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
Last Updated 19 ಅಕ್ಟೋಬರ್ 2021, 6:02 IST
ಅಕ್ಷರ ಗಾತ್ರ

ಕೊಪ್ಪಳ:ಅಸ್ಸಾಮಿನ ಅಮಾಯಕ ನಾಗರಿಕರ ಮೇಲೆ ಪೊಲೀಸ್ ದಾಳಿ ಖಂಡನೀಯ. ರಾಜ್ಯ ಸರ್ಕಾರ ಬಲವಂತವಾಗಿ ನಾಗರಿಕರನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಮುಂದಾದ ಪರಿಣಾಮ ಇಬ್ಬರು ಅಮಾಯಕ ನಾಗರಿಕರು ಹತ್ಯೆಗೀಡಾಗಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದ್ದು ತಪ್ಪಿತಸ್ಥರ ವಿರುದ್ಧ ಶೀಘ್ರ ತನಿಖೆ ನಡೆಯಬೇಕುಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜನಾಂಗೀಯ ಮತ್ತು ಕೋಮು ವಿಭಜನೆಯ ಲಾಭವನ್ನು ಪಡೆಯಲು ಯತ್ನಿಸುತ್ತಿರುವಅಸ್ಸಾಮ್ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ರಾಜೀನಾಮೆ ನೀಡಬೇಕು.ಪೊಲೀಸರು ಯಾವುದೇ ಎಚ್ಚರಿಕೆ ನೀಡದೆ, ಮಕ್ಕಳು ಮತ್ತು ಮಹಿಳೆಯರು ಸೇರಿ ಸಾವಿರಾರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಲಾಠಿ ಮತ್ತು ಬಂದೂಕು ಹೊಂದಿದ್ದ ಪೊಲೀಸರು, ಪ್ರತಿಭಟನಾಕಾರರನ್ನು ಅಟ್ಟಾಡಿಸಿಕೊಂಡು ಹೊಡೆದು, ಗುಂಡು ಹಾರಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿವೆ ಇದು ಅತ್ಯಂತ ಅಮಾನವೀಯ ಕೃತ್ಯವಾಗಿದೆ ಎಂದು ಖಂಡಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಅಸ್ಸಾಂ ಸರ್ಕಾರ ಅಕ್ರಮ ಒತ್ತುವರಿ ಎಂದು ಆರೋಪಿಸಿ, ಯಾವುದೇ ಪುನರ್ವಸತಿ ಯೋಜನೆಯನ್ನು ಕಲ್ಪಿಸದೆ ಸುಮಾರು 900ಕ್ಕೂ ಅಧಿಕ ಕುಟುಂಬಗಳನ್ನು ತೆರವುಗೊಳಿಸಿದ್ದು, ಕನಿಷ್ಠ 20 ಸಾವಿರ ಜನರು ನಿರ್ವಸಿತರಾಗಿದ್ದಾರೆ. ದರಾಂಗ್ ಜಿಲ್ಲೆಯ ಗೋರುಖುಟಿ, ಸಿಪಾಜಪುರ ಪ್ರದೇಶಗಳಲ್ಲಿ ಒಕ್ಕಲೆಬ್ಬಿಸಿದ ಸುಮಾರು 77ಸಾವಿರ ಬಿಘಾ ಭೂಮಿಯನ್ನು ಕೃಷಿಗಾಗಿ ಬಳಸಿಕೊಳ್ಳಲಾಗುವುದು ಎಂದು ಸರ್ಕಾರ ಹೇಳುತ್ತಿದೆ.

ಉತ್ತರ ಪ್ರದೇಶದ ಲಖಿಂಪುರ ಕೇರಿಯಲ್ಲಿ ಶಾಂತಿಯುತ ಅಮಾಯಕ ರೈತರ ಹತ್ಯೆ ಖಂಡಿಸಲಾಯಿತು. ಯೂತ್ ಮೂವ್‍ಮೆಂಟ್ಜಿಲ್ಲಾಅಧ್ಯಕ್ಷ ಮುಹಮ್ಮದ್ ಗೌಸ್ ಪಾಷಾ ಪಟೇಲ್, ಉಪಾಧ್ಯಕ್ಷ ಎಜಾಜ್ ಅಹ್ಮದ್ ಶೇಖ್, ಕಾರ್ಯದರ್ಶಿ ಜಕ್ರೀಯಾ ಖಾನ್, ವೆಲ್ಫೇರ್ ಪಾರ್ಟಿ ಅಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಸೈಯ್ಯದ್ ಆದಿಲ್ ಪಟೇಲ್, ಎಸ್.ಐ.ಓ ಸಂಘಟನೆ ಜಿಲ್ಲಾ ಅಧ್ಯಕ್ಷ ಇಲಿಯಾಸ್ ನಾಲಬಂದ್, ಮುಹ್ಮದ್ ಅಫ್ರೋಜ್, ಮುಹ್ಮದ್ ಇಸ್ಹಾಕ್ ಫುಜೇಲ್ ಮತ್ತು ಅಸಗರ್ ಖಾನ್, ಸಲೀಂ ಮಂಡಲಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT