ಗಂಗಾವತಿ: ತಾಲ್ಲೂಕಿನ ಜಂಗಮರ ಕಲ್ಗುಡಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಎನ್ಇಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ತಂದೆ-ಮಗ ಸಾವನ್ನಪ್ಪಿದ್ದಾರೆ.
ಗಂಗಾವತಿಯ ಜಯನಗರದ ಹನುಮಂತಪ್ಪ (38), ಪುತ್ರ ಪ್ರವೀಣ(4) ಮೃತಪಟ್ಟಿದ್ದಾರೆ.
ಗಂಗಾವತಿ ಮಾರ್ಗವಾಗಿ ಸಿಂಧನೂರಿಗೆ ತೆರಳುತ್ತಿದ್ದ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಕೃಷ್ಣೇಗೌಡ ಮತ್ತು ನಿರ್ವಾಹಕ ಉಮೇಶ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.