<p><strong>ಕಾರಟಗಿ:</strong> ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜನರ ಜೀವನಾಡಿಯಾಗಿರುವ ತುಂಗಭದ್ರಾ ಎಡದಂಡೆ ಮುಖ್ಯನಾಲೆಯು ಆಧುನೀಕರಣ ಕಾಮಗಾರಿ ಭರದಿಂದ ಸಾಗಿದೆ.</p>.<p>ನಾಲೆಯ ಮೈಲ್ 38ರಿಂದ ಮೈಲ್ 40ರ ಭಾಗಗಳಲ್ಲಿ ಭೋಂಗಾ, ಬಿರುಕು ಬಿಟ್ಟು ನೀರು ವ್ಯರ್ಥವಾಗುತ್ತಿತ್ತು. ನಾಲೆಗೆ ನೀರು ಹರಿಸುವುದರೊಳಗೆ ನಾಲೆಯ ಆಧುನೀಕರಣ ಕಾಮಗಾರಿ ಮುಗಿಸಲು ಅಧಿಕಾರಿಗಳು ನಿರ್ಧರಿಸಿದ್ದು, ಹೀಗಾಗಿ ಕಾಮಗಾರಿ ವೇಗ ಪಡೆದುಕೊಂಡಿದೆ.</p>.<p>ಮೈಲ್ 38, 39 ಮತ್ತು 40ರ ಅತ್ಯಂತ ಸೂಕ್ಷ್ಮ ತೂಗುಸೇತುವೆ ಭಾಗದಲ್ಲಿ ನಾಲೆಯನ್ನು ಭದ್ರ ಪಡಿಸುವ ಕಾಮಗಾರಿಗೆ ಆದ್ಯತೆ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಾಲೆಗೆ ನೀರು ಬಿಡುವ ದಿನ ಪ್ರಕಟಿಸುವುದರೊಳಗೆ ಕಾಮಗಾರಿಯನ್ನು ಮುಗಿಸಲಾಗುವುದು. ಈ ವರ್ಷ ರೈತರು ನಿರಾತಂಕವಾಗಿ ಭತ್ತದ ಬೆಳೆಯನ್ನು ಬೆಳೆಯಬಹುದು ಎಂಬ ಭರವಸೆಯನ್ನು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ.</p>.<p>‘ನಿಗದಿತ ಅವಧಿಯಲ್ಲಿಯೇ ಅಗತ್ಯವಿರುವೆಡೆ ನಾಲೆಯ ಕಾಮಗಾರಿ ಪೂರ್ಣಗೊಳಿಸಿ, ಅಚ್ಚುಕಟ್ಟು ಪ್ರದೇಶದ ರೈತರಿಗೆ ಸುಲಭವಾಗಿ ನೀರು ಒದಗಿಸಲಾಗುವುದು‘ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕಾಲುವೆ ಎಡ, ಬಲ ಭಾಗದ ರಕ್ಷಣಾ ಗೋಡೆಯಲ್ಲಿನ ಮುರಂ ತಗೆದು ಹೊಸ ಮುರಂ ತುಂಬಿ, ಕಾಂಕ್ರೀಟ್ನಿಂದ ಬಲ ಪಡಿಸುವುದರ ಜೊತೆಗೆ ತಳ ಭಾಗವನ್ನು ಗಟ್ಟಿಗೊಳಿಸಲಾಗುತ್ತಿದೆ. ದುರಸ್ತಿಗೆ 3 ತಂಡಗಳಲ್ಲಿ ಆಧುನಿಕ ಯಂತ್ರಗಳು, ಕಾರ್ಮಿಕರು ಲೈನಿಂಗ್ ಕಾಮಗಾರಿ ಮಾಡುತ್ತಿದ್ದಾರೆ. ಇದಕ್ಕಾಗಿಯೇ ನಾಲೆ ಬಳಿಯೇ ಅಧಿಕಾರಿಗಳ ತಂಡ ಬಿಡಾರ ಹೂಡಿದೆ‘ ಎಂದು ಎಂಜಿನಿಯರ್ ಸೂಗಪ್ಪ ಅಳವಂಡಿ ತಿಳಿಸಿದರು.</p>.<p>‘ಕಾರಟಗಿ ವಲಯದಲ್ಲಿ ಸುಮಾರು ₹ 20 ಕೋಟಿ ವೆಚ್ಚದಲ್ಲಿ ಆಧುನೀಕರಣ ಕಾಮಗಾರಿ ಮಾಡಲಾಗುತ್ತಿದೆ. ಈಗಾಗಲೇ ಗುರುತಿಸಲಾಗಿರುವ 3 ಕಿ.ಮಿ. ವ್ಯಾಪ್ತಿಯ ಕಾಮಗಾರಿ ಮುಕ್ತಾಯ ಹಂತದಲ್ಲಿದೆ‘ ಎಂದು ಸೂಗಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜನರ ಜೀವನಾಡಿಯಾಗಿರುವ ತುಂಗಭದ್ರಾ ಎಡದಂಡೆ ಮುಖ್ಯನಾಲೆಯು ಆಧುನೀಕರಣ ಕಾಮಗಾರಿ ಭರದಿಂದ ಸಾಗಿದೆ.</p>.<p>ನಾಲೆಯ ಮೈಲ್ 38ರಿಂದ ಮೈಲ್ 40ರ ಭಾಗಗಳಲ್ಲಿ ಭೋಂಗಾ, ಬಿರುಕು ಬಿಟ್ಟು ನೀರು ವ್ಯರ್ಥವಾಗುತ್ತಿತ್ತು. ನಾಲೆಗೆ ನೀರು ಹರಿಸುವುದರೊಳಗೆ ನಾಲೆಯ ಆಧುನೀಕರಣ ಕಾಮಗಾರಿ ಮುಗಿಸಲು ಅಧಿಕಾರಿಗಳು ನಿರ್ಧರಿಸಿದ್ದು, ಹೀಗಾಗಿ ಕಾಮಗಾರಿ ವೇಗ ಪಡೆದುಕೊಂಡಿದೆ.</p>.<p>ಮೈಲ್ 38, 39 ಮತ್ತು 40ರ ಅತ್ಯಂತ ಸೂಕ್ಷ್ಮ ತೂಗುಸೇತುವೆ ಭಾಗದಲ್ಲಿ ನಾಲೆಯನ್ನು ಭದ್ರ ಪಡಿಸುವ ಕಾಮಗಾರಿಗೆ ಆದ್ಯತೆ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಾಲೆಗೆ ನೀರು ಬಿಡುವ ದಿನ ಪ್ರಕಟಿಸುವುದರೊಳಗೆ ಕಾಮಗಾರಿಯನ್ನು ಮುಗಿಸಲಾಗುವುದು. ಈ ವರ್ಷ ರೈತರು ನಿರಾತಂಕವಾಗಿ ಭತ್ತದ ಬೆಳೆಯನ್ನು ಬೆಳೆಯಬಹುದು ಎಂಬ ಭರವಸೆಯನ್ನು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ.</p>.<p>‘ನಿಗದಿತ ಅವಧಿಯಲ್ಲಿಯೇ ಅಗತ್ಯವಿರುವೆಡೆ ನಾಲೆಯ ಕಾಮಗಾರಿ ಪೂರ್ಣಗೊಳಿಸಿ, ಅಚ್ಚುಕಟ್ಟು ಪ್ರದೇಶದ ರೈತರಿಗೆ ಸುಲಭವಾಗಿ ನೀರು ಒದಗಿಸಲಾಗುವುದು‘ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕಾಲುವೆ ಎಡ, ಬಲ ಭಾಗದ ರಕ್ಷಣಾ ಗೋಡೆಯಲ್ಲಿನ ಮುರಂ ತಗೆದು ಹೊಸ ಮುರಂ ತುಂಬಿ, ಕಾಂಕ್ರೀಟ್ನಿಂದ ಬಲ ಪಡಿಸುವುದರ ಜೊತೆಗೆ ತಳ ಭಾಗವನ್ನು ಗಟ್ಟಿಗೊಳಿಸಲಾಗುತ್ತಿದೆ. ದುರಸ್ತಿಗೆ 3 ತಂಡಗಳಲ್ಲಿ ಆಧುನಿಕ ಯಂತ್ರಗಳು, ಕಾರ್ಮಿಕರು ಲೈನಿಂಗ್ ಕಾಮಗಾರಿ ಮಾಡುತ್ತಿದ್ದಾರೆ. ಇದಕ್ಕಾಗಿಯೇ ನಾಲೆ ಬಳಿಯೇ ಅಧಿಕಾರಿಗಳ ತಂಡ ಬಿಡಾರ ಹೂಡಿದೆ‘ ಎಂದು ಎಂಜಿನಿಯರ್ ಸೂಗಪ್ಪ ಅಳವಂಡಿ ತಿಳಿಸಿದರು.</p>.<p>‘ಕಾರಟಗಿ ವಲಯದಲ್ಲಿ ಸುಮಾರು ₹ 20 ಕೋಟಿ ವೆಚ್ಚದಲ್ಲಿ ಆಧುನೀಕರಣ ಕಾಮಗಾರಿ ಮಾಡಲಾಗುತ್ತಿದೆ. ಈಗಾಗಲೇ ಗುರುತಿಸಲಾಗಿರುವ 3 ಕಿ.ಮಿ. ವ್ಯಾಪ್ತಿಯ ಕಾಮಗಾರಿ ಮುಕ್ತಾಯ ಹಂತದಲ್ಲಿದೆ‘ ಎಂದು ಸೂಗಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>