<p><strong>ಅಳವಂಡಿ</strong>: ‘ಶ್ರೀನಿವಾಸ್ ರಾಮಾನುಜನ್ ಒಬ್ಬ ಶ್ರೇಷ್ಠ ಗಣಿತಜ್ಞ, ಚಿಕ್ಕ ವಯಸ್ಸಿನಲ್ಲೇ ಅಪ್ರತಿಮ ಸಾಧನೆ ಮಾಡಿದ್ದಾರೆ. ಗಣಿತಕ್ಕೆ ಅವರ ಕೊಡುಗೆ ಅಪಾರವಾಗಿದೆ’ ಎಂದು ಗಣಿತ ಶಿಕ್ಷಕ ಮರ್ದಾನಲಿ ಗಡಾದ ಹೇಳಿದರು.</p>.<p>ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀನಿವಾಸ್ ರಾಮಾನುಜನ್ ಅವರ ಜನ್ಮ ದಿನದ ನಿಮಿತ್ತ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಶಿಕ್ಷಕ ರವಿಕಿರಣ್ ಟಿಕಾರೆ ಮಾತನಾಡಿ, ‘ಗಣಿತದ ಮಹತ್ವ, ರಾಮಾನುಜನ್ ಅವರ ಜೀವನ, ಸಾಧನೆ, ತಿಳಿಸುವ ಸಲುವಾಗಿ ಪ್ರತಿವರ್ಷ ಡಿ.22 ರಂದು ರಾಮಾನುಜನ್ ಅವರ ಜನ್ಮದಿನವನ್ನು ರಾಷ್ಟೀಯ ಗಣಿತ ದಿನ ಆಚರಿಸಲಾಗುತ್ತದೆ’ ಎಂದರು.</p>.<p>ಮುಖ್ಯಶಿಕ್ಷಕ ಪರಶುರಾಮ ಸಾಲ್ಮನಿ ಮಾತನಾಡಿ, ‘ಗಣಿತ ವಿಷಯ ಕಬ್ಬಿಣದ ಕಡಲೆಯಲ್ಲ ಸತತ ಪರಿಶ್ರಮ ಹಾಗೂ ಅಭ್ಯಾಸದಿಂದ ಉತ್ತಮ ಅಂಕ ಗಳಿಸಲು ಸಾಧ್ಯ’ ಎಂದರು.</p>.<p>ಶಿಕ್ಷಕ ಗಿರಿಯಪ್ಪ ಹಾರನಹಳ್ಳಿ ಗಣಿತದ ಹನಿಗವನ ಗಳನ್ನು ವಾಚಿಸಿದರು.</p>.<p>ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.</p>.<p>ಶಿಕ್ಷಕರಾದ ಗಿರಿಯಪ್ಪ ಹಾರನಹಳ್ಳಿ, ರಾಜಾಸಾಬ್ ಬಳಿಗಾರ, ಪ್ರಕಾಶರೆಡ್ಡಿ ಗೋವಿಂದರೆಡ್ಡಿ, ನಾರಾಯಣಪ್ಪ ಬಿಸನಳ್ಳಿ, ಶಾಂತವೀರಯ್ಯ ಕಳ್ಳಿಮಠ, ಸುನೀತಾ ಯಾಳಗಿ, ಶ್ವೇತಾ ಹುಲ್ಲೂರ, ಪರಶುರಾಮ್ ಯಡವಟ್ಟಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ</strong>: ‘ಶ್ರೀನಿವಾಸ್ ರಾಮಾನುಜನ್ ಒಬ್ಬ ಶ್ರೇಷ್ಠ ಗಣಿತಜ್ಞ, ಚಿಕ್ಕ ವಯಸ್ಸಿನಲ್ಲೇ ಅಪ್ರತಿಮ ಸಾಧನೆ ಮಾಡಿದ್ದಾರೆ. ಗಣಿತಕ್ಕೆ ಅವರ ಕೊಡುಗೆ ಅಪಾರವಾಗಿದೆ’ ಎಂದು ಗಣಿತ ಶಿಕ್ಷಕ ಮರ್ದಾನಲಿ ಗಡಾದ ಹೇಳಿದರು.</p>.<p>ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀನಿವಾಸ್ ರಾಮಾನುಜನ್ ಅವರ ಜನ್ಮ ದಿನದ ನಿಮಿತ್ತ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಶಿಕ್ಷಕ ರವಿಕಿರಣ್ ಟಿಕಾರೆ ಮಾತನಾಡಿ, ‘ಗಣಿತದ ಮಹತ್ವ, ರಾಮಾನುಜನ್ ಅವರ ಜೀವನ, ಸಾಧನೆ, ತಿಳಿಸುವ ಸಲುವಾಗಿ ಪ್ರತಿವರ್ಷ ಡಿ.22 ರಂದು ರಾಮಾನುಜನ್ ಅವರ ಜನ್ಮದಿನವನ್ನು ರಾಷ್ಟೀಯ ಗಣಿತ ದಿನ ಆಚರಿಸಲಾಗುತ್ತದೆ’ ಎಂದರು.</p>.<p>ಮುಖ್ಯಶಿಕ್ಷಕ ಪರಶುರಾಮ ಸಾಲ್ಮನಿ ಮಾತನಾಡಿ, ‘ಗಣಿತ ವಿಷಯ ಕಬ್ಬಿಣದ ಕಡಲೆಯಲ್ಲ ಸತತ ಪರಿಶ್ರಮ ಹಾಗೂ ಅಭ್ಯಾಸದಿಂದ ಉತ್ತಮ ಅಂಕ ಗಳಿಸಲು ಸಾಧ್ಯ’ ಎಂದರು.</p>.<p>ಶಿಕ್ಷಕ ಗಿರಿಯಪ್ಪ ಹಾರನಹಳ್ಳಿ ಗಣಿತದ ಹನಿಗವನ ಗಳನ್ನು ವಾಚಿಸಿದರು.</p>.<p>ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.</p>.<p>ಶಿಕ್ಷಕರಾದ ಗಿರಿಯಪ್ಪ ಹಾರನಹಳ್ಳಿ, ರಾಜಾಸಾಬ್ ಬಳಿಗಾರ, ಪ್ರಕಾಶರೆಡ್ಡಿ ಗೋವಿಂದರೆಡ್ಡಿ, ನಾರಾಯಣಪ್ಪ ಬಿಸನಳ್ಳಿ, ಶಾಂತವೀರಯ್ಯ ಕಳ್ಳಿಮಠ, ಸುನೀತಾ ಯಾಳಗಿ, ಶ್ವೇತಾ ಹುಲ್ಲೂರ, ಪರಶುರಾಮ್ ಯಡವಟ್ಟಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>