ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಹಾಗೂ ಉತ್ತಮ ಕಾರ್ಯನಿರ್ವಹಣೆಗಾಗಿ ಕುಷ್ಟಗಿ ಸಾರ್ವಜನಿಕ ಆಸ್ಪತ್ರೆ, ಮುನಿರಾಬಾದ್ ಸಮುದಾಯ ಆರೋಗ್ಯ ಕೇಂದ್ರ, ಚಿಕೇನಕೊಪ್ಪ ಪ್ರಾಥಮಿಕ ಅರೋಗ್ಯ ಕೇಂದ್ರ ಹಾಗೂ ವೈಯುಕ್ತಿಕ ವಿಭಾಗದಲ್ಲಿ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಹುಸೇನ ಬಾಷಾ, ಹಿರಿಯ ಪ್ರಯೋಗಶಾಲಾ ಮೇಲ್ವಿಚಾರಕ ಸೈಯದ್ ನೂರುಲ್ಲಾ, ಕ್ಷಯರೋಗ ಆರೋಗ್ಯ ಪರಿವೀಕ್ಷಕ ವೀರಭದ್ರಪ್ಪ ಹಾಗೂ ಕ್ಷಯರೋಗ ಆರೋಗ್ಯ ಪರಿವೀಕ್ಷಕ ಮಲ್ಲಿಕಾರ್ಜುನ ಹ್ಯಾಟಿ ಅವರನ್ನು ಸನ್ಮಾನಿಸಲಾಯಿತು.