ತಾಲ್ಲೂಕಿಗೆ ಮಾ.1 ರಂದು ಸಚಿವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು,‘ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಅನುದಾನ ಹಂಚಿಕೆ ವಿಷಯದಲ್ಲಿ ಹಿಂದೆ ಆಯಾ ಪಕ್ಷಗಳ ಸರ್ಕಾರಗಳು ಅಧಿಕಾರದಲ್ಲಿದ್ದಾಗ ತಮ್ಮ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಅಘೋಷಿತ ಸಂಪ್ರದಾಯ ಇತ್ತು ಎಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಅದೇ ರೀತಿ ಬೇರೆ ಬೇರೆ ಪಕ್ಷಗಳ ಶಾಸಕರು ಇರುವ ಕ್ಷೇತ್ರಗಳಿಗೂ ಕನಿಷ್ಠ ಶೇಕಡ ಅರ್ಧದಷ್ಟಾದರೂ ಅನುದಾನ ನೀಡಲಾಗುತ್ತಿತ್ತು. ಆದರೆ ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಬೇರೆ ಪಕ್ಷಗಳಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಒಟ್ಟಾರೆ ಹಣ ನೀಡದೆ ಶೇಕಡ ನೂರಕ್ಕೆ ನೂರರಷ್ಟು ಅನ್ಯಾಯ ನೀತಿ ಮುಂದುವರಿಸಿದೆ’ ಎಂದು ಅತೃಪ್ತಿ ಹೊರಹಾಕಿದರು.